Advertisement

ಕರಾವಳಿಯ ಕೆಲವೆಡೆ ಭಾರೀ ಮಳೆ

01:17 AM Nov 20, 2021 | Team Udayavani |

ಮಂಗಳೂರು/ಉಡುಪಿ/ಕಾಸರಗೋಡು: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ವಿವಿಧೆಡೆ ಭಾರೀ ಮಳೆಯಾಗಿದೆ.

Advertisement

ಮಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ 8.30ರಿಂದ ಬಿರುಸಿನ ಮಳೆ ಸುರಿದಿದೆ. ನಗರದ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ನಗರದ ಕೊಟ್ಟಾರ, ಲಾಲ್‌ಬಾಗ್‌, ಕೊಟ್ಟಾರಚೌಕಿ ಸೇರಿದಂತೆ ಕೆಲವು ಕಡೆಗಳಲ್ಲಿ ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ ಕಷ್ಟವಾಗಿತ್ತು. ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿತ್ತು. ಕುಂದಾಪುರ, ಬೈಂದೂರು ಭಾಗದ ಕೆಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಕುಂದಾಪುರ, ಕೋಟೇಶ್ವರ, ತೆಕ್ಕಟ್ಟೆ, ಬಸ್ರೂರು, ಹಾಲಾಡಿ, ಸಿದ್ದಾಪುರ, ಆಜ್ರಿ, ಮಡಾಮಕ್ಕಿ, ಮತ್ತಿತರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕಟಾವು ಆಗದಿರುವ ಭಾಗಗಳಲ್ಲಿ ಮತ್ತೆ ಮಳೆಯಿಂದಾಗಿ ತೊಂದರೆಯಾಗಿದ್ದು, ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ:ಆಸ್ಟ್ರಿಯಾದಲ್ಲಿ ಮತ್ತೆ ಜಾರಿಯಾಗಲಿದೆ ಕೋವಿಡ್ ಲಾಕ್‌ಡೌನ್‌

ಎಲ್ಲೋ ಅಲರ್ಟ್‌
ದಕ್ಷಿಣ ಕನ್ನಡ, ಕಾಸರಗೋಡು ಸಹಿತ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್‌ ಘೋಷಿಸಿದ್ದು, ಶನಿವಾರ ಕರಾವಳಿ ಆದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ವೇಳೆ ಮಳೆ ಸಹಿತ ಬಿರುಗಾಳಿ, ಸಿಡಿಲು ಇರಬಹುದೆಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next