Advertisement

ರಾಜ್ಯಾದ್ಯಂತ ಭಾರೀ ಮಳೆ: ಯಾವ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ?

09:53 AM Oct 26, 2019 | Mithun PG |

ಉಡುಪಿ/ದಕ್ಷಿಣ ಕನ್ನಡ: ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.

Advertisement

ಕ್ಯಾರ್ ಚಂಡಮಾರುತವು ಭಾರತೀಯ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಭಾರೀ ಗಾಳಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗ ರೆಡ್ ಅಲರ್ಟ್ ಘೋಷಿಸಿದೆ.

ಯಾವ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ( ಅ. 25):

ಭಾರೀ ಗಾಳೀ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ , ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿಯವರೆಗೆ) ಇಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ರಜೆ ಘೋಷಿಸಿದ್ದಾರೆ.

Advertisement

ಉಡುಪಿಯಲ್ಲೂ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಜಿಲ್ಲೆಯ ಎಲ್ಲಾ ಮಾದರಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ  ಜಿಲ್ಲಾಧಿಕಾರಿ ಜೆ. ಜಗದೀಶ್ ಮೌಖಿಕ ಆದೇಶ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲೂ ವರುಣದೇವನ ಅಬ್ಬರ ಮುಂದುವರೆದಿದ್ದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಲವೆಡೆ ಮಳೆ ಆಧಿಕವಾಗಿದೆ. ಈ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸೂಚನೆಯಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next