Advertisement

ಆ.9ರವರೆಗೂ ಕೇರಳದಲ್ಲಿ ಭಾರೀ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

09:41 PM Aug 05, 2022 | Team Udayavani |

ತಿರುವನಂತಪುರಂ: ಕೇರಳದಲ್ಲಿ ಆ.6ರಿಂದ ಆ.9ರವರೆಗೆ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರ ಎಚ್ಚರಿಕೆ ನೀಡಿದೆ.

Advertisement

ವಿವಿಧ ಸ್ಥಳಗಳಲ್ಲಿ ದಿನಕ್ಕೆ 7ರಿಂದ 11ಸೆಂ.ಮೀ.ವರೆಗೆ ಮಳೆಯಾಗಲಿದೆ. ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿಯಲಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 45ರಿಂದ 55ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ’ ಎಂದು ಎಚ್ಚರಿಸಲಾಗಿದೆ.

ಮೀನುಗಾರರಿಗೆ ಆ.9ರವರೆಗೆ ಸಮುದ್ರಕ್ಕೆ ಇಳಿಯದಂತೆಯೂ ಸೂಚಿಸಲಾಗಿದೆ. ಜು.31ರಿಂದ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜ್ಯದಲ್ಲಿ 19 ಮಂದಿ ಬಲಿಯಾಗಿದ್ದಾರೆ. 32 ಆಸ್ತಿಗಳು ಸಂಪೂರ್ಣವಾಗಿ ನಾಶವಾಗಿದ್ದರೆ, 232 ಆಸ್ತಿಗೆ ಭಾಗಶಃ ಹಾನಿಯಾಗಿದೆ ಎಂದು ಕೇರಳದ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮತ್ತೊಂದೆಡೆ, ತೆಲಂಗಾಣದಲ್ಲಿ ಇನ್ನೆರಡು ದಿನ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next