Advertisement

Maharashtra ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು

01:12 PM Jul 21, 2024 | Team Udayavani |

ಚಿಕ್ಕೋಡಿ: ಮಹಾರಾಷ್ಟ್ರ, ಜಲಾನಯನ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇತ್ತ ರಾಜ್ಯದ ಗಡಿ ಭಾಗದಲ್ಲಿಯೂ ಮಳೆ ಮುಂದುವರಿದಿರುವ ಪರಿಣಾಮ ಕೃಷ್ಣಾ, ದೂಧಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

Advertisement

ಕೊಂಕಣ ಭಾಗದ ಕೋಯ್ನಾ, ಮಹಾಬಳೇಶ್ವರ, ನವಜಾ, ವಾರಣಾ, ಕಾಳಮ್ಮವಾಡಿ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಸುರಿದಿದೆ. ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ.‌ ಹೀಗಾಗಿ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಗಳು ಒಡಲು ದಾಟಿ ಹರಿಯುತ್ತಿವೆ.

ನಿಪ್ಪಾಣಿ ತಾಲೂಕಿನಲ್ಲಿ ಹರಿಯುವ ವೇಧಗಂಗಾ ಮತ್ತು ದೂಧಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಎರಡು ನದಿಗಳ ನೀರು ರೈತರ ಜಮೀನಿಗೆ ನುಗ್ಗಿದ್ದು, ವಿವಿಧ ಬೆಳೆಗಳು ಜಲಾವೃತವಾಗಿವೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಕೃಷ್ಣಾ ನದಿ ನೀರಿನಲ್ಲಿ ಮುಳುಗಡೆಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next