Advertisement

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

03:42 PM Oct 21, 2021 | Team Udayavani |

ಚಿಕ್ಕಮಗಳೂರು: ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಸಿಗರು ಪರದಾಡುವಂತಾಗಿದೆ.

Advertisement

ಭಾರಿ ಮಳೆಯ ಪರಿಣಾಮ ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಹೊನ್ನಮ್ಮನ ಹಳ್ಳದಲ್ಲಿ ಭಾರಿ ನೀರು ಹರಿದುಬರುತ್ತಿದೆ.

ನೀರಿನ ರಭಸಕ್ಕೆ ಹೊನ್ನಮ್ಮನ ಹಳ್ಳದ ಸೇತುವೆಯ ಅಕ್ಕ ಪಕ್ಕ ಕುಸಿತ ಉಂಟಾಗಿದ್ದು, ದೇವಸ್ಥಾನದ ಒಂದು ಭಾಗದಲ್ಲಿ ಮಣ್ಣು‌ ಕುಸಿದಿದೆ.

ಇದನ್ನೂ ಓದಿ: ಐಪಿಎಲ್ ತಂಡ ಖರೀದಿಸಲು ಮುಂದಾದ ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು

ಭಾರಿ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಇನ್ನೂ ಮಳೆ ಮುಂದುವರೆದರೆ, ನದಿಗಳ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next