Advertisement

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗುರುವಾರವೂ ಶಾಲಾ ಕಾಲೇಜಿಗೆ ರಜೆ ಘೋಷಣೆ

05:47 PM Jul 06, 2022 | Team Udayavani |

ಕಾರವಾರ : ಉತ್ತರ ಕನ್ನಡದ ಕರಾವಳಿಯಲ್ಲಿ ಬುಧುವಾರ ಅಪರಾಹ್ನದ ನಂತರ ಭಾರೀ ಮಳೆ ಸುರಿಯುತ್ತಿದೆ. ಗುರುವಾರ ಮಳೆ ಹೆಚ್ಚಾಗುವ ಸುಳಿವು ಹವಾಮಾನ ಇಲಾಖೆಯಿಂದ ದೊರೆಯುತ್ತಿದ್ದಂತೆ ಜಿಲ್ಲಾಧಿಕಾರಿ ಮುಗಿಲನ್ ಶಾಲಾ ಕಾಲೇಜುಗಳಿಗೆ , ಅಂಗನವಾಡಿ ,ತಾಂತ್ರಿಕ ಶಿಕ್ಷಣ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

Advertisement

ಗುರುವಾರದ ರಜೆ ಸಂಗತಿಯನ್ನು ಬುಧುವಾರ ಸಂಜೆ ಘೋಷಿಸಿದರು ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದರು. ವಿಪತ್ತು ನಿರ್ವಹಣಾ ಸಮಿತಿ ಸೆಕ್ಷನ್ 34 ರ ಅಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಉದಯವಾಣಿಗೆ ತಿಳಿಸಿದರು‌ .

ಕರಾವಳಿ, ಘಟ್ಟ, ಮಲೆನಾಡಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಕಾಳಿ, ಗಂಗಾವಳಿ, ಅಘನಾಶಿನಿ,‌ಶರಾವತಿ ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ ನದಿ ದಂಡೆಯ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next