Advertisement

ಕಣಿವೆ ರಾಜ್ಯದಲ್ಲಿ ಪ್ರವಾಹ

06:00 AM Jul 01, 2018 | Team Udayavani |

ಶ್ರೀನಗರ: ಕಾಶ್ಮೀರದಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಝೇಲಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದಕ್ಷಿಣ ಹಾಗೂ ಕೇಂದ್ರ ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿದೆ. ಇನ್ನೂ ಕೆಲ ದಿನ ಮಳೆ ಮುಂದುವರಿ ಯಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನಾಗರಿಕರಿಗೆ ಸೂಚಿಸಲಾಗಿದೆ.

Advertisement

ದಕ್ಷಿಣ ಕಾಶ್ಮೀರದ ಸಂಗಮ್‌ನಲ್ಲಿ ಝೇಲಂ ನದಿಯ ನೀರಿನ ಮಟ್ಟ 21 ಅಡಿಗಿಂತ ಹೆಚ್ಚಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗತೊಡಗಿದೆ. ಹೀಗಾಗಿ, ಹಲವು ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜತೆಗೆ, ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇದೇ ವೇಳೆ, ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಒಬ್ಬ ಮಹಿಳೆ ಸೇರಿ ಮೂವರು ಬಲಿಯಾಗಿದ್ದಾರೆ. 12ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. 

ಅಮರನಾಥ ಯಾತ್ರೆ ಸ್ಥಗಿತ: ವರುಣನ ಆರ್ಭಟ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಎಲ್ಲ ಯಾತ್ರಾರ್ಥಿಗಳನ್ನು ಎರಡು ಬೇಸ್‌ಕ್ಯಾಂಪ್‌ಗ್ಳಿಗೆ ಕಳುಹಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next