Advertisement

ಕುಂದಾನಗರಿಯಲ್ಲಿ ಜೋರಾದ ಗಾಳಿಯ ಅಬ್ಬರ, ಮಳೆ ಆರ್ಭಟ

10:14 AM May 16, 2021 | Team Udayavani |

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ರವಿವಾರ ಬೆಳಗಿನ ಜಾವದಿಂದ ಜೋರಾದ ಗಾಳಿ-ಮಳೆ ಆಗುತ್ತಿದ್ದು, ಹಲವೆಡೆ ಗಿಡ-ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Advertisement

ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ ಕುಂದಾನಗರಿಗೂ ಅದರ‌ ಹೊಡೆತ ಬಿದ್ದಿದ್ದು, ಬೆಳಗ್ಗೆಯಿಂದಲೂ ಜೋರಾದ ಗಾಳಿ ಬೀಸುತ್ತಿದೆ. ಜಿಲ್ಲೆಯ ಬಹುತೇಕ ಕಡೆಗೆ ಮಳೆ‌ ಆಗುತ್ತಿದ್ದು, ಮಳೆ‌ ಅಬ್ಬರ ಜೋರಾಗಿದೆ.

ಇದನ್ನೂ ಓದಿ : ಒಂದೇ ಮಂಟಪದಲ್ಲಿ ಅಕ್ಕ-ತಂಗಿ ಇಬ್ಬರಿಗೆ ತಾಳಿ ಕಟ್ಟಿದ ಯುವಕ.!

ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು,‌ ಖರೀದಿಗೆ ಬಂದ ಗ್ರಾಹಕರು ಮತ್ತು ಮಾರಾಟಕ್ಕೆ ಬಂದಿದ್ದ ವ್ಯಾಪಾರಸ್ಥರು ತೀವ್ರ ತೊಂದರೆ ಪಡುವಂತಾಯಿತು.

Advertisement

Udayavani is now on Telegram. Click here to join our channel and stay updated with the latest news.

Next