Advertisement

Panchamasali ಬಸವಜಯ ಮೃತ್ಯುಂಜಯ ಶ್ರೀ ಭೇಟಿ ಮಾಡಿದ ಹೆಬ್ಬಾಳಕರ್ ಕುಟುಂಬ

12:24 PM Mar 31, 2024 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ರವಿವಾರ ಕೂಡಲಸಂಗಮ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಂಚಮಸಾಲಿ 2ಎ ಮೀಸಲಾತಿಗಾಗಿ ನಡೆದ ಸುದೀರ್ಘ ಹೋರಾಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಮತ್ತು ಮೃಣಾಲ ಹೆಬ್ಬಾಳಕರ್ ಸಕ್ರೀಯವಾಗಿ ಪಾಲ್ಗೊಂಡಿರುವುದನ್ನು ಶ್ರೀಗಳು ಸ್ಮರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next