Advertisement

ಹೆಬ್ಬಾಳ್ಕರ್‌ V/S ಜಾರಕಿಹೊಳಿ : ಕಾಂಗ್ರೆಸ್‌ ಹೈಕಮಾಂಡ್‌ಗೆ ತಲೆನೋವು

01:15 PM Sep 02, 2018 | Team Udayavani |

ಬೆಳಗಾವಿ: ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಮುಂದೂಡಿಕೆಯಾದ ಬಳಿಕ ಸ್ಫೋಟಗೊಂಡಿದ್ದ  ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್‌ಕರ್‌ ಅವರ ನಡುವಿನ ತಾರಕಕ್ಕೇರಿರುವ ಕಚ್ಚಾಟ ಇದೀಗ ಕಾಂಗ್ರೆಸ್‌ ಹೈಕಮಾಂಡ್‌ಗೆ ತಲೆನೋವು ತಂದಿಟ್ಟಿದೆ.

Advertisement

ಈಗಾಗಲೆ ಲಕ್ಷ್ಮಿ ಹೆಬ್ಬಾಳ್‌ಕರ್‌ ಅವರು ಜಾರಕಿಹೊಳಿ ಸಹೋದರರಾದ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಶಾಸಕ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಬಹಿರಂಗವಾಗಿ ಮಾಧ್ಯಮಗಳ ಎದುರು ಅಸಮಾಧಾನ ಹೊರ ಹಾಕಿದ್ದಾರೆ. 

ಇನ್ನೊಂದೆಡೆ ಸಚಿವ ಸಚಿವ ರಮೇಶ ಜಾರಕಿಹೊಳಿ ನೀಡಿರುವ ‘ಕಾಲ ಕಸ’ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. 

ಪ್ರತಿಷ್ಠೆಯನ್ನು ಪಣಕ್ಕಿಟ್ಟಿರುವ ಪ್ರಭಾವಿ ನಾಯಕರ ಹೋರಾಟ ಕಾಂಗ್ರೆಸ್‌ ನಾಯಕರಿಗೆ ತಲೆನೋವು ತಂದಿಟ್ಟಿದ್ದು  ಸಮಸ್ಯೆ ಬಗೆ ಹರಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಧಾನ ಕಾರರನ್ನಾಗಿ ಕೆಪಿಸಿಸಿ ನೇಮಿಸಿದೆ. 

ಇನ್ನೊಂದೆಡೆ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಾರದಂತೆ ಪಕ್ಷದ ನಾಯಕರಿಗೆ ಹೈಕಮಾಂಡ್‌ ಎಚ್ಚರಿಕೆಯನ್ನೂ ನೀಡಿದೆ.

Advertisement

ನಾವೇ ಬಗೆ ಹರಿಸಿಕೊಳ್ಳುತ್ತೇವೆ
ಶಾಸಕ ಸತೀಶ್‌ ಜಾರಕಿಹೊಳಿ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ಯಾರ ಮಧ್ಯ ಪ್ರವೇಶವೂ ಬೇಡ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಟಾಂಗ್‌ ನೀಡಿದ್ದಾರೆ. 

ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅಸಮಾಧಾನ ಎಲ್ಲಾ ಕಡೆ ಇರುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಬಣಗಳಿರುತ್ತವೆ. ಚುನಾವಣೆ ಬಂದಾಗ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next