Advertisement

Manipal: ರಾಜಸ್ಥಾನದ ಖ್ಯಾತ ಕಲಾವಿದರಿಂದ ಸಂಗೀತ ಕಾರ್ಯಕ್ರಮ

10:09 AM Aug 22, 2024 | Team Udayavani |

ಮಣಿಪಾಲ: ಹೆಬ್ಬಾರ್ ಗ್ಯಾಲರಿ ಮತ್ತು ಆರ್ಟ್ಸ್ ಸೆಂಟರ್ (ಎಚ್‌ಜಿಎಸಿ) ಜೋಧಪುರದ ಖ್ಯಾತ ಕಲಾವಿದರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದು ಅದರಂತೆ ಆಗಸ್ಟ್ 23ರ (ಶುಕ್ರವಾರ) ಸಂಜೆ 6 ಗಂಟೆಗೆ ಮಣಿಪಾಲ ಸೆಂಟರ್ ಫಾರ್ ಹ್ಯುಮಾನಿಟೀಸ್‌ ಕಟ್ಟಡದಲ್ಲಿರುವ ಗಂಗೂಬಾಯಿ ಹಾನಗಲ್ ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಲಿದೆ.

Advertisement

ಈ ಸಂಗೀತ ಕಾರ್ಯಕ್ರಮದಲ್ಲಿ ಸಿಂಧಿ ಸಾರಂಗಿ, ಧೋಲಕ್, ಮೋರ್ಚಾಂಗ್ ಮತ್ತು ಖರ್ತಾಲ್ ಸೇರಿದಂತೆ ರಾಜಸ್ಥಾನ ಮತ್ತು ಉತ್ತರಪ್ರದೇಶದ ನಾಲ್ಕು ಸಂಗೀತ ಪರಿಕರಗಳನ್ನು ಬಳಸಿ ಕಲಾವಿದರು ಪ್ರದರ್ಶನ ನೀಡಲಿದ್ದಾರೆ.

ಉಚಿತ ಪ್ರವೇಶ ಮೊದಲು ಬಂದವರಿಗೆ ಆಧ್ಯತೆ:
ಈ ಸಂಗೀತ ಕಾರ್ಯಕ್ರಮ ಉಚಿತವಾಗಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next