Advertisement

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

01:07 AM Mar 19, 2024 | Team Udayavani |

ಹೆಬ್ರಿ: ಹೆಬ್ರಿ ಸಮೀಪ ಜೆಟ್‌ ಕಟ್‌ ಬಳಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಮೂಲದ ಜಸ್ವಿನ್‌ ಎಚ್‌. ರೆಡ್ಡಿ ಮೃತಪಟ್ಟ ವಿದ್ಯಾರ್ಥಿನಿ.

Advertisement

ಮಣಿಪಾಲದಿಂದ ಸೋಮೇಶ್ವರದ ಕಡೆ ಹೋಗುತ್ತಿದ್ದ ಸ್ಕೂಟಿಗೆ ಎದುರುಗಡೆಯಿಂದ ಬಂದ ಕಾರೊಂದು ಢಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯರು ಸಹಕರಿಸಿದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next