Advertisement

Hebri; ದೊಣ್ಣೆಯಿಂದ ಹೊಡೆದು ತಮ್ಮನಿಂದ ಅಣ್ಣನ ಕೊಲೆ: ಆರೋಪಿ ವಶಕ್ಕೆ

12:22 AM Apr 01, 2024 | Team Udayavani |

ಹೆಬ್ರಿ: ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎನ್ನುವಲ್ಲಿ ಮಾ. 31ರಂದು ನಡೆದಿದೆ.

Advertisement

ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಗುಲಾಬಿ ಅವರ ಮಗ ಮಂಜುನಾಥ (35) ಮೃತಪಟ್ಟವರು. ಕೊಲೆ ಆರೋಪಿ ವಿಶ್ವನಾಥ(30)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದು, ಇವರಿಬ್ಬರು ಆಗಾಗ ಗಲಾಟೆ ಮಾಡುತ್ತಿದ್ದರು. ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದ್ದ. ಇದೇ ವಿಚಾರದಲ್ಲಿ ವಿಶ್ವನಾಥ ಕೋಪಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದ. ಪರಿಣಾಮ ತೀವ್ರ ರಕ್ತ ಹರಿದು ಮಂಜುನಾಥ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next