Advertisement

ಹಿರಿಯ ಅಧಿಕಾರಿಗಳ ತರಾಟೆ; ಹೆಬ್ರಿ ಠಾಣಾಧಿಕಾರಿ ಮಹಾಬಲ ರಾಜೀನಾಮೆ?

06:23 PM Jul 06, 2018 | Sharanya Alva |

ಉಡುಪಿ:ಸಿವಿಲ್ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದರ ಹಿನ್ನೆಲೆಯಲ್ಲಿ ಮನನೊಂದ ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಅವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆಂಬ ವದಂತಿ ಹಬ್ಬಿದೆ.

Advertisement

ಕೆಲವು ವರ್ಷದಿಂದ ಹೆಬ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಾಬಲ ಶೆಟ್ಟಿಯವರು ಪ್ರಾಮಾಣಿಕ ಹಾಗೂ ಖಡಕ್ ಅಧಿಕಾರಿ ಎಂಬ ಹೆಸರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಮನವೊಲಿಸಲು ಯತ್ನಿಸುತ್ತಿದ್ದಾರೆಂದು ಹೇಳಲಾಗಿದೆ.

ಹಿರಿಯ ಅಧಿಕಾರಿಗಳ ತರಾಟೆಯಿಂದ ಮನನೊಂದು ಮೊಬೈಲ್ ಅನ್ನು ಮೇಜಿನ ಮೇಲಿಟ್ಟು, ಕೆಲವು ಹಿರಿಯ ಅಧಿಕಾರಿಗಳಿಗೆ ಮಾತ್ರ ಮಾಹಿತಿ ನೀಡಿ ಠಾಣೆಯಿಂದ ಹೊರನಡೆದಿರುವುದಾಗಿ ಬಲ್ಲ ಮೂಲದಿಂದ ತಿಳಿದು ಬಂದಿದೆ.

ಎಸ್ ಐ ಮಹಾಬಲ ಶೆಟ್ಟಿಯವರು ರಾಜೀನಾಮೆ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಲು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನಿರಾಕರಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next