Advertisement

Sullia ಬಾರದ ವಾರಸುದಾರರು: ಪೊಲೀಸ್‌, ಸ್ಥಳೀಯಾಡಳಿತದಿಂದ ಅಂತ್ಯಸಂಸ್ಕಾರ

10:11 PM Sep 16, 2023 | Team Udayavani |

ಸುಳ್ಯ: ವಾರದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಲ್ಲಿನ ಹೊಟೇಲ್‌ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಸಂಬಂಧಿಕರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಠಾಣಾ ಪೊಲೀಸರು, ಸ್ಥಳೀಯಾಡಳಿತ ನೆರವಿನೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

Advertisement

ರಥಬೀದಿಯಲ್ಲಿನ ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ಶ್ರೀಲೂಲು ಸೆ. 3ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಕುಟುಂಬಸ್ಥರು ಮತ್ತು ಪರಿಚಯಸ್ಥರು ಬಾರದ ಹಿನ್ನೆಲೆಯಲ್ಲಿ ಮೃತದೇಹವನ್ನು ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಲಾಗಿತ್ತು.

ವ್ಯಕ್ತಿಯ ಸಂಬಂಧಿಕರು ಇದ್ದಲ್ಲಿ ಸುಳ್ಯ ಠಾಣೆ ಸಂಪರ್ಕಿಸುವಂತೆ ಪ್ರಕಟನೆ ನೀಡಲಾಗಿತ್ತು. ಆದರೂ ಯಾರ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಸುಳ್ಯ ಕೇರ್ಪಳದ ರುದ್ರ ಭೂಮಿಯಲ್ಲಿ ಪೊಲೀಸ್‌ ಇಲಾಖೆ ಮತ್ತು ಸುಳ್ಯ ನಗರ ಪಂಚಾಯತ್‌ ನೇತೃತ್ವದಲ್ಲಿ ಸ್ಥಳೀಯರ ಸಹಕಾರದಿಂದ ಅಂತ್ಯ ಸಂಸ್ಕಾರ ಮಾಡಲಾಯಿತು. ಈ ಸಂದರ್ಭ ಸುಳ್ಯ ಠಾಣಾ ತನಿಖಾ ವಿಭಾಗದ ಉಪನಿರೀಕ್ಷಕಿ ಸರಸ್ವತಿ, ಪೊಲೀಸ್‌ ಸಿಬಂದಿ ಹಾಗೂ ನಗರ ಪಂಚಾಯತ್‌ ಸಿಬಂದಿ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next