Advertisement

ಹೆಜಮಾಡಿ ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ದಾಖಲೆ ರಹಿತ ಐದು ಲಕ್ಷ ರೂ. ಸಾಗಾಟ ಪತ್ತೆ

10:14 PM Mar 27, 2023 | Team Udayavani |

ಪಡುಬಿದ್ರಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಿರತ ಪೊಲೀಸರು ಮಂಗಳೂರು-ಉಡುಪಿ ನಡುವೆ ಸಂಚರಿಸುತ್ತಿದ್ದ ಕಾರಿನಲ್ಲಿ 5 ಲಕ್ಷ ರೂ. ಅಕ್ರಮ ಹಣ ಸಾಗಾಟ ಮಾಡುತ್ತಿರುವುದನ್ನು ರವಿವಾರ ಸಂಜೆ ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಪಡುಬಿದ್ರಿ ಪೊಲೀಸ್‌ ಠಾಣಾಧಿಕಾರಿ ಪುರುಷೋತ್ತಮ ಎ. ನೇತೃತ್ವದಲ್ಲಿ ಪೊಲೀಸರು ಹೆಜಮಾಡಿ ಚೆಕ್‌ ಪೋಸ್ಟ್‌ ನಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಚಾಲಕನ ಎಡ ಬದಿಯ ಟೂಲ್ಸ್‌ ಬಾಕ್ಸ್‌ ಒಳಗಡೆ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿನ ಕೇಸರಿ ಬಣ್ಣದ ಪ್ರಸಾದದ ಕೈ ಚೀಲದೊಳಗೆ 500 ರೂಪಾಯಿ ಮುಖ ಬೆಲೆಯ 5 ಲಕ್ಷ ರೂ. ನಗದು ಪತ್ತೆಯಾಗಿದೆ.

ಕಾರು ಚಾಲಕ ಅಹಮ್ಮದ್‌ ಕಬೀರ್‌ ಹಾಗೂ ಕಾರಿನಲ್ಲಿದ್ದ ಅಬ್ದುಲ್‌ ಖಾದರ್‌ ಜೈಲಾನಿ ಎಂಬವರನ್ನು ವಿಚಾರಿಸಿದಾಗ ಈ ಹಣದ ಬಗ್ಗೆಯಾವುದೇ ದಾಖಲಾತಿಗಳನ್ನು ಹಾಜರುಪಡಿಸದ ಪರಿಣಾಮ ಹಣ ಮತ್ತು ಕಾರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next