Advertisement

Akhilesh Yadav ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ : ತುರ್ತು ಲ್ಯಾಂಡ್

08:57 PM Nov 08, 2023 | Vishnudas Patil |

ಖಜುರಾಹೊ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಮಧ್ಯಪ್ರದೇಶದ ಖಜುರಾಹೊ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ನಂತರ ಕೆಲವು ತಾಂತ್ರಿಕ ದೋಷ ಕಂಡುಬಂದಿದ್ದು 10 ನಿಮಿಷಗಳ ಕಾಲ ಗಾಳಿಯಲ್ಲಿ ಉಳಿದ ನಂತರ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

Advertisement

ಯಾದವ್ ಅವರು ಸಿಧಿ ಮತ್ತು ಚಿತ್ರಕೂಟ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಬೇಕಿತ್ತು, ಆದರೆ ಎರಡೂ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಯಿತು ಎಂದು ಎಸ್‌ಪಿಯ ರಾಷ್ಟ್ರೀಯ ವಕ್ತಾರ ಯಶ್ ಭಾರತೀಯ ಹೇಳಿದರು.

ಯಾದವ್ ಅವರಿದ್ದ ಹೆಲಿಕಾಪ್ಟರ್ 10 ನಿಮಿಷಗಳ ಕಾಲ ಗಾಳಿಯಲ್ಲಿಯೇ ಇತ್ತು. ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಅದು 12.30 ರ ಸುಮಾರಿಗೆ ಸುರಕ್ಷಿತವಾಗಿ ವಿಮಾನ ನಿಲ್ದಾಣಕ್ಕೆ ಮರಳಿತು.

ಮಧ್ಯಪ್ರದೇಶದಲ್ಲಿ ನವೆಂಬರ್ 17 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಜತೆಗಿನ ಜಟಾಪಟಿ ನಂತರ ಎಸ್ಪಿ ಅಧ್ಯಕ್ಷರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಹುರುಪಿನಿಂದ ಪ್ರಚಾರ ಮಾಡುತ್ತಿದ್ದಾರೆ. ಅಖಿಲೇಶ್ ಪ್ರಸ್ತುತ ರಾಜ್ಯದ ಛತ್ತರ್‌ಪುರ ಜಿಲ್ಲೆಯಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next