Advertisement

ಕೇದಾರನಾಥಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: ಆರು ಮಂದಿ ಸಾವು

12:21 PM Oct 18, 2022 | Team Udayavani |

ಉತ್ತರಾಖಂಡ: ಫಟಾದಿಂದ ತೀರ್ಥಕ್ಷೇತ್ರ ಕೇದಾರನಾಥಕ್ಕೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾದ ಘಟನೆ ಮಂಗಳವಾರ ನಡೆದಿದೆ.

Advertisement

ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಕೇದಾರನಾಥದಿಂದ ಸುಮಾರು ಎರಡು ಕಿ.ಮೀ ದೂರದಲ್ಲಿನ ಗರುಡ ಚಟ್ಟಿ ಎಂಬಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪೈಲಟ್ ಸೇರಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಮಂದಿ ಈ ದುರ್ಘಟನೆಯಲ್ಲಿ ಅಸುನೀಗಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ತಂಡವು ಸ್ಥಳಕ್ಕೆ ತೆರಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next