Advertisement

ಹೀಲಿಯಂ ಬಲೂನ್‌ ಸ್ಫೋಟ: ಅಪಾಯದಿಂದ ಸುತ್ತೂರು ಶ್ರೀಗಳು ಪಾರು

12:50 AM Feb 06, 2019 | |

ಮೈಸೂರು: ಸುತ್ತೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ಮಂಗಳವಾರ ಮಧ್ಯಾಹ್ನ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಹೀಲಿಯಂ ಬಲೂನ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಥಳದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಹಲವರು ಇದ್ದ ಪರಿಣಾಮ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಕೆಲವು ನಾಯಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶ್ರೀಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಶ್ರೀ ಮಠ ಪ್ರಕಟಣೆ ಹೊರಡಿಸಿದೆ. ಈ ಘಟನೆ ತಿಳಿದ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್‌ ಸೇರಿ ಹಲವು ಗಣ್ಯರು ಶ್ರೀಗಳಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Advertisement

ಶ್ರೀಗಳೂ ಹೇಳಿಕೆ ನೀಡಿದ್ದು, “”ತಾವೂ ಸೇರಿ ಯಾರಿಗೂ ದೊಡ್ಡ ಮಟ್ಟದ ಗಾಯಗಳಾಗಿಲ್ಲ. ಕ್ಷೇಮವಾಗಿದ್ದು, ಯಾರೂ ಆತಂಕಪಡುವುದು ಬೇಡ” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next