Advertisement

ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ

10:22 AM Oct 15, 2021 | Team Udayavani |

ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು .

Advertisement

ಅವರು ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ  ಚಾಲನೆ ನೀಡಿ ಮಾತನಾಡಿದರು .

ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ ಅರಸರು ನಂತರ ವಿಜಯನಗರ ಇದೀಗ ಮೈಸೂರಿನಲ್ಲಿ ಸರ್ಕಾರದ ಪರವಾಗಿ ನಾಡಹಬ್ಬದ ಆಚರಣೆ ಮಾಡಲಾಗುತ್ತಿದೆ .ದಸರಾ ಹಬ್ಬ ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾಗಿದ್ದ ನಾಡು ನುಡಿ ಸಂಸ್ಕೃತಿಯ ಅನಾವರಣ ಈ ಹಬ್ಬದಲ್ಲಿ ಆಗುತ್ತದೆ .ಸರಕಾರ ಈ ಹಬ್ಬಕ್ಕೆ ಇನ್ನಷ್ಟು ಮೆರುಗು ನೀಡಲು ದಸರಾ ಹಬ್ಬವನ್ನು ಕುಮ್ಮಟದುರ್ಗದಿಂದ ಆರಂಭಿಸಿ ವಿಜಯನಗರ ನಂತರ ಮೈಸೂರಿನಲ್ಲಿ ನಿರಂತರವಾಗಿ ಆಚರಣೆ ಮಾಡುವಂತಾಗಬೇಕು .ಹೇಮಗುಡ್ಡದ ಶ್ರೀದುರ್ಗಾಪರಮೇಶ್ವರಿ ಕುಮ್ಮಟದುರ್ಗದ ಮತ್ತು ಕನಕಗಿರಿ ದೊರೆಗಳ ಅಧಿದೈವವಾಗಿದ್ದಾಳೆ .ಮನುಷ್ಯ ಆಧ್ಯಾತ್ಮಿಕ ಧಾರ್ಮಿಕವಾಗಿ ಒಳ್ಳೆಯ ನಡತೆಯುಳ್ಳವನು ಆದರೆ ಅವನ ಜೀವನವು ಒಳ್ಳೆಯದಾಗುತ್ತದೆ ಎಂದರು .

ಶಾಸಕ ಪರಣ್ಣ ಮುನವಳ್ಳಿ ಈ ಸಂದರ್ಭದಲ್ಲಿ ಮಾತನಾಡಿ ಹೇಮಗುಡ್ಡದಲ್ಲಿ ಮಾಜಿ ಸಂಸದ ಎಚ್ ಜಿ ರಾಮುಲು ಅವರ ಕುಟುಂಬದವರು ಕಳೆದ ಮೂವತ್ತು ವರ್ಷಗಳಿಂದ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದಾರೆ .ಕಳೆದ 2ವರ್ಷಗಳಿಂದ ಕೊರೋನಾ ಮಹಾಮಾರಿಯ ಪರಿಣಾಮ ಇಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಆದರೂ ಈ ಬಾರಿ ಆನೆಯ ಮೇಲೆ ಅಂಬಾರಿಯಲ್ಲಿ ದುರ್ಗಾಪರಮೇಶ್ವರಿಯನ್ನು  ಪ್ರತಿಷ್ಠಾಪಿಸಿ ನಾಡಿನ ವಿವಿಧ ಜಾನಪದ ಕಲಾ ತಂಡಗಳು ಸಾಂಸ್ಕೃತಿಕ ಅನಾವರಣ ಮಾಡುವ ಮೂಲಕ ಮೆರವಣಿಗೆ ಜರುಗುತ್ತದೆ ಆದ್ದರಿಂದ ನಾಡಹಬ್ಬ ಎಲ್ಲರಿಗೂ ಒಳಿತನ್ನು ಮಾಡಲಿ ಎಂದರು .

ದಸರಾ 9ದಿನಗಳ ಕಾಲ ಹೇಮಗುಡ್ಡದಲ್ಲಿ ದೇವಿಯ ಪ್ರವಚನ ನಿತ್ಯವೂ ತ್ರಿಕಾಲ ಪೂಜೆ ಅನ್ನಸಂತರ್ಪಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ದಸರಾವನ್ನು ಆಚರಣೆ ಮಾಡಲಾಗುತ್ತದೆ . 9 ದಿನಗಳ ಕಾಲ ಮಾಜಿ ಸಂಸದ ಎಚ್. ಜಿ. ರಾಮುಲು ಹಾಗೂ ಎಚ್. ಆರ್. ಶ್ರೀನಾಥ್ ಕುಟುಂಬದವರು ಹೇಮಗುಡ್ಡದಲ್ಲಿ ಮೊಕ್ಕಾಂ ಹೂಡಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಾರೆ. ಕೊರೋನಾ ಇದ್ದ ಪ್ರಯುಕ್ತ ಕಳೆದ ವರ್ಷ ಮತ್ತು ಈ ಬಾರಿ ಉಚಿತ ಸಾಮೂಹಿಕ ವಿವಾಹಗಳು ನೆರವೇರಿಸಲಾಗಲಿಲ್ಲ .

Advertisement

ಆನೆ ಮೇಲೆ ಅಂಬಾರಿ ಮೆರವಣಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕರಾದ ಪರಣ್ಣ ಮುನವಳ್ಳಿ,  ಮಾಜಿ ಎಂಎಲ್ಸಿ ಎಚ್. ಆರ್ .ಶ್ರೀನಾಥ್ ಮುಖಂಡರಾದ ಸಿದ್ದಪ್ಪ ನೀರಲೂಟಿ ,ಇಲಿಯಾಸ್ ಬಾಬಾ, ಜೋಗದ ಹನುಮಂತಪ್ಪ ,ಕೆಲೋಜಿ ಸಂತೋಷ್ ,ರೆಡ್ಡಿ ಶ್ರೀನಿವಾಸ್ ,ಬಿ. ಕೃಷ್ಣಪ್ಪ ನಾಯಕ್ ,ಎಚ್ ಆರ್ ಭರತ್ ,ಅಯೂಬ್ ಖಾನ್  ಸೇರಿ ಹೇಮಗುಡ್ಡ, ಚಿಕ್ಕಬೆಣಕಲ್, ಎಚ್ ಆರ್ ಜಿ ನಗರ, ಮುಕ್ಕುಂಪಿ ಸೇರಿದಂತೆ ತಾಲ್ಲೂಕಿನ ಮತ್ತು ಜಿಲ್ಲೆಯ ವಿವಿಧ ಗ್ರಾಮಗಳ ಗ್ರಾಮಸ್ಥರು ನಾಡಹಬ್ಬ ದಸರಾದಲ್ಲಿ ಪಾಲ್ಗೊಂಡಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next