Advertisement

ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ

03:40 PM Aug 21, 2018 | |

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆಯೇ ಚರಿತ್ರೆ ಅಮರವಾಗಿ ಉಳಿಯಲು ಸಾಧ್ಯ ಎಂದು ಶ್ರೀಶೈಲಂನ 1008 ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

Advertisement

ಆಂಧ್ರ ಪ್ರದೇಶದ ಶ್ರೀಶೈಲಂನ ರಡ್ಡಿ ಚೌಲಿó ಕಲ್ಯಾಣ ಮಂಟಪದಲ್ಲಿ ಹೇಮರಡ್ಡಿ ಮಲ್ಲಮ್ಮ ಚಾರಿಟಬಲ್‌ ಚೌಲಿ ಟ್ರಸ್ಟ್‌ ಕರ್ನಾಟಕ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಆಯೋಜಿಸಿದ್ದ ತೆಲುಗು ಅನುವಾದದ ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಾಧನೆ ಇದ್ದಲ್ಲಿ ಮಾತ್ರ ಸಮಾಜ, ಸಂಘಟನೆ ಬಲವಾಗುತ್ತದೆ.

ಈ ನಿಟ್ಟಿನಲ್ಲಿ ಮಲ್ಲಮ್ಮ ಬದುಕಿನಲ್ಲಿ ಲೌಕಿಕ ಜೀವನದ ಜೊತೆಗೆ ಆಧ್ಯಾತ್ಮಿಕ ಸಾಧನೆಯಿಂದ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾಗಿ ಶ್ರೀಶೈಲಂನ ಅವಿಭಾಜ್ಯ ಅಂಗವಾಗಿ ಉಳಿದು ಎಲ್ಲರ ಮನಸ್ಸಿನಲ್ಲಿ ನೆಲೆಸಿದ್ದಾಳೆ. ಅವರ ದೇವಸ್ಥಾನವನ್ನು ಇಲ್ಲಿ ನಿರ್ಮಾಣ ಮಾಡುವ ಮೂಲಕ ಸಮಾಜದ ಮೌಲ್ಯ ಹೆಚ್ಚಿದೆ ಎಂದು ಹೇಳಿದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಕೃತಿ ಬಿಡುಗಡೆ
ಮಾಡಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ರಡ್ಡಿ ಸಮಾಜದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿರುವ ಪರೋಪಕಾರ ಗುಣವನ್ನು ಕಂಡಿದ್ದೇನೆ.

ದಾವಣಗೇರೆಯಲ್ಲಿ ರಡ್ಡಿ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ನಿಲಯ ಕಟ್ಟಡಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಶಾಸಕ ನಾಗನಗೌಡ ಕಂದಕೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಶರಣೆ ಮಲ್ಲಮ್ಮಳ ಜೀವನ ಸಂದೇಶ ಮನುಕುಲಕ್ಕೆ ಮಾದರಿಯಾಗಿವೆ. ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಜೀವನ ನಡೆಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಮಲ್ಲಮ್ಮ ಜೀವನ ಚರಿತ್ರೆ ಪುಸ್ತಕವನ್ನು ತೆಲುಗು ಭಾಷೆಯಲ್ಲಿ ಪ್ರಕಟ ಮಾಡಿರುವುದರಿಂದ ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ವಾಸಿಸುತ್ತಿರುವ ಮಲ್ಲಮಳ ಅನುಯಾಯಿಗಳಿಗೆ ಅವರ ಜೀವನ, ಸಾಧನೆ ತಿಳಿಯುತ್ತದೆ ಎಂದು ತಿಳಿಸಿದರು.

Advertisement

ಬೀಳಗಿ ಶಾಸಕ ಮುರಗೇಶ ನಿರಾಣಿ ಮತ್ತು ಟ್ರಸ್ಟ್‌ನ ಅಧ್ಯಕ್ಷ ವೈ.ಬಿ. ಆಲೂರ ಮಾತನಾಡಿದರು. ಹೆಡಗಿಮದ್ರಾದ ಶ್ರೀಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪೂಜ್ಯ ಗುರುಪಾದ ಸ್ವಾಮಿ, ಮಾಜಿ ಶಾಸಕ ಗುರುನಾಥರಡ್ಡಿ ಕೊಡಂಗಲ್‌, ಡಾ| ಶೇಖರಗೌಡ ಪಾಟೀಲ, ಶರಣಪ್ಪಗೌಡ ಮಲ್ಹಾರ, ಡಾ| ಶಿವಲಿಂಗ ಮೂರ್ತಿ, ಶಾಂತರಡ್ಡಿ ವನಕೇರಿ, ಅಕ್ಕಮಹಾದೇವಿ ಪಾಟೀಲ, ಗೌರಮ್ಮ ರಡ್ಡಿ ವಿಜಯಪುರ, ವೀರಾರಡ್ಡಿ ಬಟಗೇರಾ, ಜೋಸುಲಾ ಸದಾನಂದ ಶಾಸ್ತ್ರಿ,
ಮೋಹನಮಠ ಕಣವಿ, ಡಾ| ಬಸನಗೌಡ ಪಾಟೀಲ, ಹೇಮಂತಕುಮಾರ ಅಜ್ಜಂಪುರ ವೇದಿಕೆ ಮೇಲಿದ್ದರು. ರಡ್ಡಿ ಸಮಾಜದ ಗಣ್ಯರು, ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next