Advertisement

ಹೇನ್‌ಬೇರು: ಕಾರಿನಲ್ಲಿ ವ್ಯಕ್ತಿಯನ್ನು ಸುಟ್ಟ ಪ್ರಕರಣ: ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

06:14 PM Aug 04, 2022 | Team Udayavani |

ಕುಂದಾಪುರ: ಒತ್ತಿನೆಣೆ ಸಮೀಪದ ಹೇನ್‌ಬೇರು ನಿರ್ಜನ ಪ್ರದೇಶದಲ್ಲಿ ಕಾರ್ಕಳದ ಆನಂದ ದೇವಾಡಿಗ (60) ಅವರನ್ನು ಕಾರಿನೊಳಗೆ ಕೂಡಿ ಹಾಕಿ ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಲಾಗಿದ್ದು, ಆ. 16ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕುಂದಾಪುರದ ಪ್ರಧಾನ ಸಿವಿಲ್‌ ನ್ಯಾಯಾಲಯ ಆದೇಶ ನೀಡಿದೆ.

Advertisement

ಇದನ್ನೂ ಓದಿ:  ಬ್ರಹ್ಮಾವರ: ಚಿನ್ನಾಭರಣ, 2 ಕಾರು ಸಹಿತ 20 ಲಕ್ಷ ರೂ. ಮೌಲ್ಯದ ಸೊತ್ತು ವಶ; ಮೂವರ ಬಂಧನ

ಕೊಲೆ ಕೃತ್ಯದ ಆರೋಪಿಗಳಾದ ಸದಾನಂದ ಶೇರೆಗಾರ್‌ (52), ಶಿಲ್ಪಾ ಪೂಜಾರಿ (30) ಮತ್ತು ಅವರಿಗೆ ಸಹಕರಿಸಿದ ಸತೀಶ್‌ ದೇವಾಡಿಗ (49) ಹಾಗೂ ನಿತಿನ್‌ ದೇವಾಡಿಗ (35) ಅವರಿಗೆ ಕುಂದಾಪುರದ ಪ್ರಧಾನ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಧನೇಶ್‌ ಮುಗಳಿ ಅವರು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಶ್ರೀ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next