Advertisement

ಬಂಗಾಲಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ : ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ

09:07 AM Aug 07, 2022 | Team Udayavani |

ಮಂಗಳೂರು/ಉಡುಪಿ : ಬಂಗಾಲಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ದಿನ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಆ. 7ರಂದು ಕರಾ ವಳಿ ಭಾಗದಲ್ಲಿ “ರೆಡ್‌ ಅಲರ್ಟ್‌’, ಆ. 8 ಮತ್ತು 9ರಂದು “ಆರೆಂಜ್‌ ಅಲರ್ಟ್‌’ ಘೋಷಿಸಿದೆ.

Advertisement

ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಹಾಗೂ ತೆರಳಿರುವ ಎಲ್ಲ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.

ದಿನವಿಡೀ ಉತ್ತಮ ಮಳೆ
ಮುಂಗಾರು ಬಿರುಸುಗೊಂಡ ಪರಿಣಾಮ ದ.ಕ., ಉಡುಪಿ ಜಿಲ್ಲೆಯಲ್ಲಿ ಶನಿವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಶುಕ್ರವಾರ ಮುಂಜಾನೆ ಯಿಂದಲೇ ಮಳೆ ಸುರಿದಿದ್ದು, ಶನಿವಾರವೂ ಮುಂದು ವರಿದಿತ್ತು. ಪುತ್ತೂರು, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಜಾಳ್ಸೂರು, ಕಲ್ಮಕಾರು, ಐನೆಕಿದು, ಹರಿಹರ ಪಲ್ಲತ್ತಡ್ಕ, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಮಡಂತ್ಯಾರು, ಬಂಟ್ವಾಳ, ಕನ್ಯಾನ, ಸುರತ್ಕಲ್‌, ಉಳ್ಳಾಲ, ಮೂಡುಬಿದಿರೆಯಲ್ಲಿ ಮಳೆಯಾಗಿದೆ.

ಉಡುಪಿ, ಬ್ರಹ್ಮಾವರ, ಹೆಬ್ರಿ, ಕಾರ್ಕಳ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಉಡುಪಿ ನಗರ ಸುತ್ತಮುತ್ತ, ಮಲ್ಪೆ, ಮಣಿಪಾಲ, ಪೆರ್ಡೂರು, ಹಿರಿಯಡಕ, ಕಾಪು, ಪಡುಬಿದ್ರಿ, ಅಜೆಕಾರು, ಹೆಬ್ರಿ ಬಿಟ್ಟುಬಿಟ್ಟು ಧಾರಾಕಾರ ಮಳೆಯಾಗಿದೆ. ಹಲವೆಡೆ ಕೃಷಿ ಭೂಮಿ, ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.

ಅನಾಥ ದೋಣಿ ಪತ್ತೆ
ಕಟಪಾಡಿ : ಮೀನುಗಾರಿಕೆ ನಡೆಸುವ ಸಣ್ಣ ದೋಣಿಯೊಂದು ಉದ್ಯಾ ವರ ಪಡುಕರೆಯ ಭುವನೇಶ್ವರೀ ಭಜನ ಮಂದಿರದ ಸಮೀಪ ಸಮುದ್ರ ಕಿನಾರೆಯಲ್ಲಿ ಅನಾಥ ಸ್ಥಿತಿಯಲ್ಲಿ ಶನಿವಾರ ಕಂಡು ಬಂದಿದೆ. ಸ್ಥಳೀಯ ಮೀನುಗಾರರು ದೋಣಿಯನ್ನು ಮೇಲಕ್ಕೆ ಎಳೆದು ತಂದಿದ್ದಾರೆ. ಬೈಂದೂರು, ಗಂಗೊಳ್ಳಿ ಭಾಗದಲ್ಲಿ ನಡೆದ ಪ್ರಕೃತಿ ವಿಕೋಪದ ಸಂದರ್ಭ ಹಲವು ದೋಣಿಗಳು ಕೊಚ್ಚಿಹೋಗಿದ್ದು, ಈ ಪಾತಿ ದೋಣಿಯು ಅಲ್ಲಿಂದ ಬಂದಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next