Advertisement

ದೀಪಾವಳಿ ಸಂಭ್ರಮಕ್ಕೆ ಜೈಶ್ ದಾಳಿ ಬೆದರಿಕೆ: ಬಿಗು ಭದ್ರತೆ

09:59 AM Oct 28, 2019 | Team Udayavani |

ಹೊಸದಿಲ್ಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಯೋಜನೆ ರೂಪಿಸಿದೆ ಎಂಬ ಗುಪ್ತಚರ ಮಾಹಿತಿಯನ್ವಯ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

Advertisement

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಜನ ಸೇರುವ ಜಾಗಗಳಲ್ಲಿ ಬಿಗು ಬಂದೋಬಸ್ತು ಮಾಡಲಾಗಿದೆ.

ಮಾಲ್ ಗಳು, ರೈಲ್ವೇ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ, ಬೆಂಗಳೂರು, ಅಹಮದಾಬಾದ್ ನಗರಗಳಲ್ಲಿ ಕೂಡಾ ಕಟ್ಟೆಚ್ಚರ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next