Advertisement

ಶ್ರೀರಂಗಪಟ್ಟಣದಲ್ಲಿ ಉಗ್ರರ ಬಂಧನ ವದಂತಿ: ಜಿಲ್ಲೆಯಲ್ಲಿ ಕಟ್ಟೆಚ್ಚರ

10:07 AM Oct 07, 2019 | sudhir |

ಮಂಡ್ಯ :ಉಗ್ರರ ಬಂಧನ ವದಂತಿಗಳು ಹೆಚ್ಚಿತ್ತಿದ್ದಂತೆ ಶ್ರೀರಂಗಪಟ್ಟಣ ಜಿಲ್ಲೆಯ ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳ ಬಳಿ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ನಡೆಸಲಾಯಿತು.

Advertisement

ಹೆಚ್ಚು ಜನ ಸಂದಣಿ ಇರುವ ಪ್ರದೇಶಗಳಾದ ಬಸ್ ಸ್ಟಾಂಡ್, ರೈಲ್ವೆ ನಿಲ್ದಾಣ, ಹೈವೆಯಲ್ಲಿ ಅನುಮಾನಸ್ಪದವಾಗಿ ನಿಂತಿರೋ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಮದರಸ ಮಸೀದಿಗಳಿಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಶ್ರೀರಂಗಪಟ್ಟಣ ಸುತ್ತಮುತ್ತಲಿನ ರೆಸಾರ್ಟ್, ಲಾಡ್ಜ್ , ಹೊರ ವಲಯದ ಫಾರ್ಮ್ಹೌಸ್ ಗಳಲ್ಲಿ ಬಂದು ಹೋದವರ ಬಗ್ಗೆ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ನಿನ್ನೆಯಷ್ಟೇ ಅಧಿಕಾರಿಗಳು ಉಗ್ರರ ಬಂಧನ ಕೇವಲ ವಂದತಿ ಎಂದು ಹೇಳಿದ್ದರು ಆದರೆ ಪೊಲೀಸರ ಕಾರ್ಯಾಚರಣೆಯನ್ನು ನೋಡಿದರೆ ಸಾರ್ವಜನಿಕರಲ್ಲಿ ಆತಂಕ ಮೂಡುವಂತಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next