Advertisement

Congress ಹೈಕಮಾಂಡ್ ಆದೇಶವೇ ಅಂತಿಮ: ಸ್ಪರ್ಧೆ ಮಾಡೋಲ್ಲ- ಉಮಾಶ್ರೀ ಸ್ಪಷ್ಟನೆ

07:19 PM Apr 19, 2023 | Team Udayavani |

ರಬಕವಿ-ಬನಹಟ್ಟಿ : ಇದೀಗ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ತೇರದಾಳ ಕ್ಷೇತ್ರದಿಂದ ಪಕ್ಷ ಅಥವಾ ಪಕ್ಷೇತರವಾಗಿಯೂ ಸ್ಪರ್ಧೆ ಮಾಡುವದಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ಸ್ಪಷ್ಟಪಡಿಸಿದರು.

Advertisement

ಅವರು ಬುಧವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದು ಕೊಣ್ಣೂರ ನಮ್ಮ ಪಕ್ಷದ ಅಭ್ಯರ್ಥಿ. ಪಕ್ಷದ ನಾಯಕಿಯಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದು ನನ್ನ ಕರ್ತವ್ಯವಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಮುಂದಿನ ದಿನಗಳಲ್ಲಿ ಪಕ್ಷದ ಇತರೆ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಸ್ತಿತ್ಯಾಂತರಗಳು ಮತ್ತು ಬದಲಾವಣೆಗಳು ಸಾಮಾನ್ಯ ಎಂದು ಉಮಾಶ್ರೀ ತಿಳಿಸಿದರು.

ಇದನ್ನೂ ಓದಿ: ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ವರಿಷ್ಠರು ಪಕ್ಷದ ಪರವಾಗಿ ಸಿದ್ದು ಕೊಣ್ಣೂರ ಅವರಿಗೆ ಬಿ ಫಾರ್ಮ್ ನೀಡಿದೆ. ಮೇಲಿನಿಂದ ಬಂದ ಆದೇಶದಂತೆ ಕ್ಷೇತ್ರದ ಎಲ್ಲ ಕಾರ್ಯಕರ್ತರೂ, ಮುಖಂಡರು ಸೇರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಇನ್ನೆರಡು ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಗೆಲ್ಲಿಸುವ ಕೆಲಸದಲ್ಲಿ ತೊಡಗುತ್ತೇವೆಂದು ಉಮಾಶ್ರೀ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next