Advertisement

ಖೇಣಿ ಸಹೋದರರ ಅರ್ಜಿ: ಟಿ.ಜೆ. ಅಬ್ರಹಾಂಗೆ ಹೈಕೋರ್ಟ್‌ ನೋಟಿಸ್‌

10:39 PM Aug 09, 2022 | Team Udayavani |

ಬೆಂಗಳೂರು: ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಚೀಟಿಯಲ್ಲಿ ಸಹಿ ನಕಲು ಆರೋಪ ಸಂಬಂಧ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಅಶೋಕ್‌ ಖೇಣಿ ಮತ್ತವರ ಸಹೋದರ ಸಂಜಯ್‌ ಖೇಣಿ ಸಲ್ಲಿಸಿದ್ದ ಅರ್ಜಿ ಸಂಬಂಧ ದೂರುದಾರ, ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

Advertisement

ಖೇಣಿ ಸಹೋದರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ಸುನಿಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಸೆ. 5ಕ್ಕೆ ಮುಂದೂಡಿತು.

2013ರ ಎ. 1ರಂದು ಬೀದರ್‌ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆ ಕೋರಿ ಅಶೋಕ್‌ ಖೇಣಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಶೋಕ್‌ ಖೇಣಿ ಸಹಿಯನ್ನು ಅವರ ಸಹೋದರ ಸಂಜಯ್‌ ಖೇಣಿ ನಕಲು ಮಾಡಿದ್ದರು. ಈ ಸಂದರ್ಭ ಅಶೋಕ್‌ ಖೇಣಿ ವಿದೇಶ ಪ್ರವಾಸದಲ್ಲಿದ್ದರು ಎಂದು ಆರೋಪಿಸಿ ಅಬ್ರಹಾಂ ದೂರು ನೀಡಿದ್ದರು. ಇದರಿಂದ ಖೇಣಿ ಸಹೋದರರ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next