Advertisement

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್‌.ಕೆ. ಬಸವರಾಜನ್‌ಗೆ ಹೈಕೋರ್ಟ್‌ ಜಾಮೀನು

09:22 PM Dec 22, 2022 | Team Udayavani |

ಬೆಂಗಳೂರು: ಪೋಕ್ಸೋ  ಹಾಗೂ ಎಸ್ಸಿ-ಎಸ್ಟಿ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪ ಹೊತ್ತು ಜೈಲಿನಲ್ಲಿರುವ ಮುರುಘಾ ಶರಣರ ವಿರುದ್ದ ಕ್ರಿಮಿನಲ್‌ ಸಂಚು ರೂಪಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌ ಅವರಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಕೆ. ಬಸವರಾಜನ್‌ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ರಾಚಯ್ಯ ಅವರಿದ್ದ ರಜಾ ಕಾಲದ ವಿಶೇಷ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಹಷ್ಮತ್‌ ಪಾಷ, ಅರ್ಜಿದಾರರ ವಿರುದ್ಧ ಐಪಿಸಿ ಕಲಂ120-ಬಿ (ಅಪರಾಧಿಕ ಪಿತೂರಿ), 384 (ಸುಲಿಗೆ), 420 (ವಂಚನೆ) ಮತ್ತು 366-ಎ (ಅಪ್ರಾಪ್ತ ಬಾಲಕಿಯನ್ನು ದುರುದ್ದೇಶ ಸಾಧನೆಗೆ ಬಳಸಿಕೊಂಡ ಆರೋಪ) ಅಡಿಯಲ್ಲಿ ಹೂಡಲಾಗಿರುವ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ. ಬಸವರಾಜನ್‌ ಮನೆಯಲ್ಲಿ ಮಲಗಿದ್ದಾಗ ಪೊಲೀಸರು ರಾತ್ರೊರಾತ್ರಿ ಬಂದು ಎಬ್ಬಿಸಿ ಕರೆದುಕೊಂಡು ಹೋಗಿ ನಂತರ ಎಫ್ಐಆರ್‌ ದಾಖಲಿಸಿದ್ದಾರೆ. ಆರೋಪಿ ಮುರುಘಾ ಶರಣರು ಗಂಭೀರವಾದ ಪೊಕೊÕ  ಪ್ರಕರಣದಲ್ಲಿ ಸಿಲುಕಿರುವ ಕಾರಣ ಬಸವರಾಜನ್‌ ವಿರುದ್ಧ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಸುಳ್ಳುಗಳಿಂದ ಕೂಡಿದ ಪ್ರತಿದೂರು ದಾಖಲಿಸಿದ್ದಾರೆ. ಅಪರಾಧವೇ ನಡೆದಿಲ್ಲದಿರುವಾಗ ಅರ್ಜಿದಾರರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿರುವುದು ಕಾನೂನು ಬಾಹಿರ. ಆದ್ದರಿಂದ, ಜಾಮೀನು ಅರ್ಜಿ ಮಾನ್ಯ ಮಾಡಬೇಕು’ ಎಂದು ಕೋರಿದ್ದರು.

ಈ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next