Advertisement

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

01:44 AM Sep 24, 2024 | Team Udayavani |

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರ ಹೇಳಿಕೆಗಳು ಗೊಂದಲಕ್ಕೆ ಕಾರಣವಾದ ಬೆನ್ನಲ್ಲೇ  ನ್ಯಾಯಾಲಯ ಕಲಾಪದ ನೇರ ಪ್ರಸಾರದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳು, ವೈಯಕ್ತಿಕ ಖಾತೆಗಳು, ಸಂಕಲನ ಮಾಡುವುದು ಹಾಗೂ ಮರು ಪ್ರಸಾರ ಮಾಡುವುದನ್ನು ತತ್‌ಕ್ಷಣ ಸ್ಥಗಿತಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಬೆಂಗಳೂರು ವಕೀಲರ ಸಂಘವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Advertisement

ಸೋಮವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿ ದ್ದಂತೆ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌
ಅವರಿದ್ದ ಏಕಸದಸ್ಯ ನ್ಯಾಯ ಪೀಠದ ಮುಂದೆ ವಿಷಯವನ್ನು ಪ್ರಸ್ತಾವಿಸಿದರು. ವಕೀಲರ ಮನವಿ ಆಲಿಸಿದ ನ್ಯಾಯಪೀಠವು ವಿಚಾ ರಣೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿತು.

ಅರ್ಜಿಯಲ್ಲಿ ಏನಿದೆ?
ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ಕಾರ್ಪ್‌, (ಟ್ವಿಟರ್‌) ಮತ್ತು ಇತರ ತಾಣಗಳಲ್ಲಿ ಯೂಟ್ಯೂಬ್‌ನಲ್ಲಿ ನೇರ ಪ್ರಸಾರದ ಮೂಲಕ ಪಡೆದಿರುವ ವೀಡಿಯೋಗಳು, ವೀಡಿಯೋ ಕ್ಲಿಪ್‌ಗ್ಳು ಹಾಗೂ ಸಂಕಲನ ಮಾಡಿರುವ ವೀಡಿಯೋಗಳನ್ನು ತತ್‌ಕ್ಷಣ ತೆರವು ಮಾಡಬೇಕು. ಈ ರೀತಿಯ ವೀಡಿಯೋಗಳನ್ನು ಬಳಕೆ ಮಾಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next