Advertisement

‘ಪಾಕಿಸ್ಥಾನ ಜಿಂದಾಬಾದ್’ ಎಂದ Whats App ಅಡ್ಮಿನ್ ಗಳಿಗೆ ಜಾಮೀನಿಲ್ಲ

11:46 AM Jan 29, 2019 | Team Udayavani |

ಬೆಂಗಳೂರು: ವಾಟ್ಸಾಪ್ ಗ್ರೂಪೊಂದರಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ಸಂದೇಶವನ್ನು ಹರಿಯ ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರಿಗೆ ಜಾಮೀನು ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ಈ ಸಂದೇಶ ಸಣ್ಣದಾಗಿದ್ದರೂ ಅದರ ಪರಿಣಾಮ ತೀವ್ರ ಸ್ವರೂಪದ್ದಾಗಿರಬಹುದಾದ ಸಾಧ್ಯತೆಗಳಿರುವುದರಿಂದ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂಬ ಅಭಿಪ್ರಾಯವನ್ನು ನ್ಯಾಯಮೂರ್ತಿ ಸುಧೀಂದ್ರ ರಾವ್ ನೇತೃತ್ವದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

Advertisement

ಆಗಸ್ಟ್ 14ರಂದು ವಾಟ್ಸಾಪ್ ಗ್ರೂಪೊಂದರಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ಸಂದೇಶವನ್ನು ಹಾಕಿದ್ದಕ್ಕೆ ಸಂಬಂಧಪಟ್ಟಂತೆ ಹನುಮ ಗೌಡ ಎಂಬವರು ಕೊಪ್ಪಳ ಪೊಲೀಸ್ ಠಾಣೆಯಲ್ಲಿ ರಾಜದ್ರೋಹದ ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸರು ಮುಸ್ತಫಾ, ಶಬ್ಬೀರ್ ಮತ್ತು ಚಾಂದ್ ಪಾಷಾ ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಜಾಮೀನು ನಿರಾಕರಿಸಿರುವುದರಿಂದ ಮೂವರು ಆರೋಪಿಗಳಿಗೆ ಸದ್ಯಕ್ಕೆ ಜೈಲುವಾಸ ಖಾಯಂ ಆದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next