Advertisement

ಧಾರವಾಡ ಹೈಕೋರ್ಟ್ ಪೀಠ ಲೋಕ‌ ಅದಾಲತ್: 5 ಕೋಟಿ 77 ಲಕ್ಷ ರೂ.ಮೊತ್ತದ 183 ಪ್ರಕರಣಗಳ ಇತ್ಯರ್ಥ

05:01 PM Aug 13, 2022 | Team Udayavani |

ಧಾರವಾಡ : ಇಲ್ಲಿ‌ನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 183 ಪ್ರಕರಣಗಳನ್ನು 5,77,12,376 ರೂ.ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು .

Advertisement

ಹಿರಿಯ ನ್ಯಾಯಮೂರ್ತಿಗಳಾದ ಎಸ್ .ಜಿ.ಪಂಡಿತ್ ಅವರ ಮಾರ್ಗದರ್ಶನದಲ್ಲಿ , ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ , ರವಿ ವಿ . ಹೊಸಮನಿ ಮತ್ತು ಅನಂತ ರಾಮನಾಥ ಹೆಗಡೆ ಹಾಗೂ ಲೋಕ ಅದಾಲತ್‌ನ ಸದಸ್ಯರುಗಳಾದ ಎಲ್ . ಟಿ . ಮಂಟಗಣಿ, ಎಸ್. ಎಸ್. ಬಾವಾಖಾನ, ಎಮ್. ಟಿ. ಬಂಗಿ ಮತ್ತು ಎಮ್. ಸಿ . ಹುಕ್ಕೇರಿ ಅವರನ್ನೊಳಗೊಂಡ 4 ಪೀಠಗಳಲ್ಲಿ ವ್ಯಾಜ್ಯಗಳ ರಾಜಿ ಸಂಧಾನ ನಡೆದವು.

ಇದನ್ನೂ ಓದಿ:ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ

ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಹಾಗೂ ವಕೀಲರಾದ ಎಮ್. ಸಿ. ಹುಕ್ಕೇರಿ ಅವರ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ – ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿದ್ದು ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನ ಹೆಗ್ಗಳಿಕೆಯಾಗಿದೆ ಎಂದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next