Advertisement
ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆ ಕುರಿತು ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ಕುಮಾರ್ ಬರೆದಿದ್ದ ಪತ್ರ ಆಧರಿಸಿ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ನ್ಯಾಯ ಪೀಠ ವಿಚಾರಣೆ ನಡೆಸಿತು.
ಈ ವಿಚಾರದಲ್ಲಿ ನಿಲುವು ತಿಳಿಸಲು ಎರಡು ವಾರಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಅದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಪ್ರತಿಭಟನೆ ಹಾಗೂ ಧರಣಿಗಳಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ಬಗೆಹರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ
ನಿಲವು ತಿಳಿಸುವಂತೆ ಕಳೆದ ವಿಚಾರಣೆ ವೇಳೆಯೇ ಸರ್ಕಾರಕ್ಕೆ ಸೂಚಿಸಿಲಾಗಿತ್ತು. ಆದರೆ, ಈವರೆಗೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಅರ್ಜಿಯಲ್ಲಿ
ಪ್ರತಿವಾದಿಗಳಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿತು