Advertisement

ನೀತಿ ಸಂಹಿತೆ ಉಲ್ಲಂಘನೆ ಕೇಸ್; ಪರಂ ಸಮನ್ಸ್ ಗೆ ಹೈಕೋರ್ಟ್ ಮಧ್ಯಂತರ ತಡೆ

10:57 AM Jun 01, 2019 | Team Udayavani |

ಬೆಂಗಳೂರು: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.

Advertisement

ಚುನಾವಣಾ ಪ್ರಚಾರದ ವೇಳೆ ಸಾವಳಗಿ ಗ್ರಾಮದಲ್ಲಿ ಬಹಿರಂಗ  ಸಭೆಯಲ್ಲಿ ಮಾತನಾಡುತ್ತ ಗ್ರಾಮದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಮತ ಚಲಾಯಿಸಿದರೆ ಮೂರು ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿದ್ದರು. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ದೂರು ನೀಡಿದ್ದರು.

ಎಫ್ಐಆರ್ ದಾಖಲಿಸಿಕೊಂಡಿದ್ದ ಜಮಖಂಡಿ ಪೊಲೀಸರು ವಿಚಾರಣೆ ನಡೆಸಿ ಚಾಜ್೯ಶೀಟ್ ಸಲ್ಲಿಸಿದ್ದರು. ಇದನ್ನು ಆಧರಿಸಿ ವಿಶೇಷ ನ್ಯಾಯಾಲಯ 2019ರ ಏ.25 ರಂದು ಸಮನ್ಸ್ ಜಾರಿಗೊಳಿಸಿ ಮೇ 31ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದೀಗ ಹೈಕೋರ್ಟ್ ಸಮನ್ಸ್ ಗೆ ಮಧ್ಯಂತರ ತಡೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next