Advertisement
ಈ ಪ್ರಕರಣದಲ್ಲಿ ನಮ್ಮನ್ನು ರಾಜಕೀಯ ಕಾರಣಕ್ಕಾಗಿ, ಕಿರುಕುಳ ನೀಡುವುದು ಮತ್ತು ಅಪಮಾನಿಸುವ ಉದ್ದೇಶದಿಂದ ಸಿಲುಕಿಸಲಾಗಿದ್ದು, ಹಾಗಾಗಿ ಪ್ರಕರಣದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ವೇದವ್ಯಾಸ್ ಕಾಮತ್ ಮತ್ತಿತರರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ, ದೂರುದಾರರ ಅರ್ಜಿಯನ್ನು ಪುರಸ್ಕರಿಸಿ ರಾಜ್ಯ ಸರಕಾರ ಮತ್ತು ಪ್ರತಿವಾದಿ ಅನಿಲ್ ಜೆರಾಲ್ಡ್ ಲೋಬೋ ಅವರಿಗೆ ನೋಟಿಸ್ ಜಾರಿಗೊಳಿಸಿತು.
ಫೆ. 12ರಂದು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಪ್ರಭಾ ಹಿಂದೂ ದೇವರ ಅವಹೇಳನ ಮಾಡಿದ್ದಾರೆ ಎಂಬ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರ ವರ್ತನೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರಭಾ ಅವರನ್ನು ಸಂಸ್ಥೆ ಸೇವೆಯಿಂದ ವಜಾಗೊಳಿಸಲಾಗಿತ್ತು. ಆದರೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್ವೆಲ್, ಸಂದೀಪ್ ಗರೋಡಿ ಮತ್ತು ಭರತ್ ಕುಮಾರ್ ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಎಫ್ಐಆರ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು.