Advertisement

High Court: ಯತ್ನಾಳ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ

11:06 PM Jan 12, 2024 | Team Udayavani |

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧದ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಶುಕ್ರವಾರ ಮಧ್ಯಾಂತರ ತಡೆಯಾಜ್ಞೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

Advertisement

ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ ಗದಗದ ಒಂದನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಿತು. ಅಲ್ಲದೆ, ಮೂಲ ದೂರುದಾರರಾದ ಮಂಜುನಾಥ್‌ ಕಲಬುರಗಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಹೆಬ್ಟಾಳ್ಕರ್‌, ರಹೀಂ ಖಾನ್‌ ವಿಚಾರಣೆ ಮುಂದೂಡಿಕೆ
ಇದೆ ವೇಳೆ ಸಚಿವರಾದ ಲಕ್ಷ್ಮೀ ಹೆಬ್ಟಾಳ್ಕರ್‌ ಮತ್ತು ರಹೀಂ ಖಾನ್‌ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ವಿಚಾರಣೆಯನ್ನು ಜ.19ಕ್ಕೆ ನ್ಯಾಯಾಲಯ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next