Advertisement

ಪ್ರೇಮ ವಿವಾಹ: ಮೊದಲು ಪೋಷಕರ ತ್ಯಾಗ ನೆನಪಿಸಿಕೊಳ್ಳಿ: ಬುದ್ಧಿ ಮಾತು ಹೇಳಿದ ಹೈಕೋರ್ಟ್‌

10:22 PM Jun 14, 2022 | Team Udayavani |

ಬೆಂಗಳೂರು: ಪ್ರೌಢಾವಸ್ಥೆಗೆ ಬಂದ ಕೂಡಲೇ ತಾವು ಸ್ವತಂತ್ರರು ಎಂದುಕೊಂಡು ಬಯಸಿದ ಸಂಗಾತಿಯನ್ನು ಅರಸಿ ಪ್ರೇಮ ವಿವಾಹವಾಗುವ ಮುನ್ನ ಹೆತ್ತ ತಂದೆ-ತಾಯಿ ಮಾಡಿದ ತ್ಯಾಗವನ್ನು ಮಕ್ಕಳು ಒಮ್ಮೆ ನೆನಪಿಸಿಕೊಳ್ಳಬೇಕು ಎಂದು ಹೈಕೋರ್ಟ್‌ ಬುದ್ಧಿ ಮಾತು ಹೇಳಿದೆ.

Advertisement

ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಕಾಲೇಜಿನ ವ್ಯಾನ್‌ ಚಾಲಕನನ್ನು ಪ್ರೇಮ ವಿವಾಹವಾದ ಪ್ರಕರಣದಲ್ಲಿ ಮಗಳನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಕೋರಿ ವಿದ್ಯಾರ್ಥಿನಿಯ ತಂದೆ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಮಾತನ್ನು ಹೇಳಿತು.

ಆದರೆ, ಪ್ರಕರಣದಲ್ಲಿ ವಿದ್ಯಾರ್ಥಿನಿಗೆ 19 ವರ್ಷವಾಗಿದ್ದು, ವಯಸ್ಕರು ತಾವು ಬಯಸಿದ ವ್ಯಕ್ತಿಯೊಂದಿಗೆ ಜೀವಿಸುವ ಹಕ್ಕನ್ನು ಸಂವಿಧಾನ ನೀಡಿದೆ.

ಪತಿಯೊಂದಿಗೆ ಜೀವಿಸುವುದಾಗಿ ವಿದ್ಯಾರ್ಥಿನಿ ಪಟ್ಟು ಹಿಡಿದ ಕಾರಣ ತಂದೆಯ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತು. ಮಾತ್ರ ವಲ್ಲದೆ ಆಕೆಯ ಪತಿಯ ಜತೆಗೆ ತೆರಳಲು ವಿದ್ಯಾರ್ಥಿನಿಗೆ ಅನುಮತಿ ನೀಡಿತು.

ಹೆತ್ತವರಿಗಿಂತ ದೊಡ್ಡ ದೇವರಿಲ್ಲ
ಪ್ರಕರಣದ ವಿಚಾರಣೆ ವೇಳೆ ಪೋಷಕರ ಅಳಲು ಕೇಳಿದ ನ್ಯಾಯಮೂರ್ತಿಗಳು, ಹೆತ್ತವರಿಗಿಂತ ದೊಡ್ಡ ದೇವರಿಲ್ಲ. ಸಹಾನುಭೂತಿಗಿಂತ ದೊಡ್ಡ ಧರ್ಮವಿಲ್ಲ. ಜನ್ಮ ನೀಡಿ ಬೆಳೆಸಿದ ತಂದೆ-ತಾಯಿಯ ಋಣ ತೀರಿಸಲು ಅಸಾಧ್ಯ ಎಂದರು.

Advertisement


ಪಾಸ್‌ಪೋರ್ಟ್‌: ಮಧ್ಯಾಂತರ ತಡೆ

ಬೆಂಗಳೂರು: ಕ್ರಿಮಿನಲ್‌ ವಿಚಾರಣೆ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ಯಾಜ್ಞೆ ನೀಡಿದ್ದರೆ, ಪಾಸ್‌ಪೋರ್ಟ್‌ ನವೀಕರಣಕ್ಕೆ ವಿಚಾರಣ ನ್ಯಾಯಾಲಯದ ಅನುಮತಿ ಅಗತ್ಯವಿಲ್ಲ ಎನ್ನುವ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಮಧ್ಯಾಂತರ ತಡೆ ನೀಡಿದೆ. ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ತಡೆ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next