Advertisement

ಐಎಸ್‌ಐ ಜತೆಗೆ ನೌಕಾದಳದ ಮಾಹಿತಿ ಹಂಚಿಕೊಂಡ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಣೆ

11:21 PM Jul 18, 2022 | Team Udayavani |

ಬೆಂಗಳೂರು: ಪಾಕಿಸ್ಥಾನದ ಗೂಢಚರ್ಯೆ ಸಂಸ್ಥೆ ಐಎಸ್‌ಐನೊಂದಿಗೆ ಭಾರತದ ನೌಕಾದಳದ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಜೈಲು ಪಾಲಾಗಿರುವ ಜಿತೇಂದರ್‌ ಸಿಂಗ್‌ ಅವರಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ಜಿತೇಂದರ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿದ ನ್ಯಾ| ಕೆ. ನಟರಾಜನ್‌ ಅವರ ನ್ಯಾಯಪೀಠ, ಬೆಂಗಳೂರಿ ನಿಂದ ಪಾಕಿಸ್ಥಾನದ ಗುಪ್ತಚರ ದಳಕ್ಕೆ ಅರ್ಜಿದಾರ ಮಾಹಿತಿ ಹಂಚಿಕೊಂಡಿ ರುವುದು ದಾಖಲೆಯಿಂದ ಸ್ಪಷ್ಟವಾಗುತ್ತದೆ.

ಅರ್ಜಿದಾರ ಸಂಗ್ರಹಿಸಿ ಹಂಚಿಕೊಂಡಿರುವ ಮಾಹಿತಿ ಭಾರತದ ಸುರಕ್ಷೆ ಮತ್ತು ಭದ್ರತೆ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ದೇಶದ ಸಮಗ್ರತೆ ಹಾಗೂ ಸೌರ್ವಭೌಮತ್ವದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹಾಗಾಗಿ, ಜಾಮೀನು ನೀಡಲು ಇದು ಅರ್ಹ ಪ್ರಕರಣವಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

 

Advertisement

Udayavani is now on Telegram. Click here to join our channel and stay updated with the latest news.

Next