Advertisement

ಸಚಿವ ವಿ. ಸೋಮಣ್ಣ ವಿರುದ್ಧದ ಸಮನ್ಸ್‌ ರದ್ದುಪಡಿಸಿದ ಹೈಕೋರ್ಟ್‌

10:20 PM Sep 05, 2022 | Team Udayavani |

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಆರೋಪಿಸಿ 2013ರಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್‌ ರದ್ದುಪಡಿಸುವಂತೆ ವಿ. ಸೋಮಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಸ್‌. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಮನ್ಸ್‌ ರದ್ದುಪಡಿಸಿ ಪ್ರಕರಣವನ್ನು ಮತ್ತೆ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.

ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ನಗರದ ರಾಮಕೃಷ್ಣ ಎಂಬವರು 2013ರಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next