Advertisement

‘ನಾತಿಚರಾಮಿ’ಪ್ರಶಸ್ತಿ ವಿವಾದ: ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಆದೇಶ

09:06 AM Sep 12, 2019 | Hari Prasad |

ಬೆಂಗಳೂರು: ಕನ್ನಡದ ‘ನಾತಿಚರಾಮಿ’ ಚಲನಚಿತ್ರಕ್ಕೆ 2018ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಐದು ಪ್ರಶಸ್ತಿ ಲಭಿಸಿರುವ ವಿವಾದಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್‌. ಲಿಂಗದೇವರು ಅವರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ, ಕಾನೂನು ರೀತಿ ಕ್ರಮ ಜರುಗಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಈ ಕುರಿತು ಸಿನಿಮಾ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್‌.ಟಿ. ನರೇಂದ್ರಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅವು ಸಾಬೀತಾದರೆ ಕಾನೂನು ರೀತಿ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ವಕೀಲರು, ನವದೆಹಲಿಯ ಚಲನಚಿತ್ರೋತ್ಸವ ನಿರ್ದೇಶನಾಲಯದ ನಿರ್ದೇಶಕರ ಪ್ರಮಾಣವನ್ನು ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆ ನಡೆಸಿ ಆರೋಪ ಸಾಬೀತಾದರೆ ಕಾನೂನು ರೀತಿ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ಆರೋಪಗಳೇನು?
66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2018ರ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್‌ ಲಿಂಗದೇವರು “ಅಕ್ಕ ಕಮ್ಯುನಿಕೇಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ಯ ನಿರ್ದೇಶಕರೂ ಸಹ ಆಗಿದ್ದಾರೆ. ಮೇಲಾಗಿ ನಾತಿಚರಾಮಿ’ ಚಿತ್ರದ ಸಂಕಲನಕ್ಕೆ ‘ಅಕ್ಕ’ ಕಂಪನಿ ಸಹಾಯ ಮಾಡಿದೆ. ಈ ಮೂಲಕ ಲಿಂಗದೇವರು ನಾತಿಚರಾಮಿ’ ಚಿತ್ರದ ನಿರ್ಮಾಣದಲ್ಲಿ ನೇರ ಪಾತ್ರ ವಹಿಸಿರುವುದು ಸ್ಪಷ್ಟವಾಗಿದೆ. ಆದರೆ, ಆಯ್ಕೆ ಸಮಿತಿ ಮುಂದೆ ನೀಡಲಾಗಿದ್ದ ಘೋಷಣಾ ಪ್ರಮಾಣ ಪತ್ರದಲ್ಲಿ ಈ ಅಂಶವನ್ನು ಮರೆಮಾಚಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next