Advertisement

ರವಿ ಬೆಳಗೆರೆ ಜಾಮೀನು ರದ್ದು ನಿರಾಕರಿಸಿದ ಹೈಕೋರ್ಟ್‌

11:38 AM Jun 29, 2018 | Team Udayavani |

ಬೆಂಗಳೂರು: ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ್ದ ಆರೋಪ ಪ್ರಕರಣದಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆಗೆ ಅಧೀನ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವ ಕಾರಣದಿಂದ ರವಿ ಬೆಳಗೆರೆಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ತಿರಸ್ಕರಿಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಯು ಜಾಮೀನು ಷರತ್ತು ಉಲ್ಲಂಘಿಸಿರುವುದಕ್ಕೆ ಪ್ರಬಲ ಸಾಕ್ಷ್ಯಗಳನ್ನು ನೀಡುವಲ್ಲಿ ಪ್ರಾಸಿಕ್ಯೂಶನ್‌ ವಿಫ‌ಲವಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ. ಜತೆಗೆ ಅಧೀನ ನ್ಯಾಯಾಲಯ ಜಾಮೀನು ನೀಡುವಾಗ ಸ್ಪಷ್ಟ ಕಾರಣಗಳನ್ನು ನೀಡಿದೆ. ಹೀಗಾಗಿ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next