Advertisement

High Court; 232 ಕೋ. ರೂ. ಸಾಲ ಕೇಸ್‌: ತನಿಖೆಗೆ ಸಹಕರಿಸಲು ಜಾರಕಿಹೊಳಿಗೆ ಸೂಚನೆ

12:21 AM Mar 16, 2024 | Team Udayavani |

ಬೆಂಗಳೂರು: ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಮತ್ತು ಅದರ ಸಮೂಹ ಬ್ಯಾಂಕ್‌ಗಳಿಂದ ಸುಮಾರು 232 ಕೋಟಿ ರೂ. ಸಾಲ ಪಡೆದು ಅದನ್ನು ಮರುಪಾವತಿಸದ ಹಿನ್ನೆಲೆಯಲ್ಲಿ ವಂಚನೆ ಆರೋಪ ಎದುರಿಸುತ್ತಿರುವ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ಹೈಕೋರ್ಟ್‌ ಸೂಚಿಸಿದೆ.

Advertisement

ಅಲ್ಲದೆ ಒಂದೊಮ್ಮೆ ವಂಚನೆ ಆರೋಪ ಎದುರಿಸುತ್ತಿರುವ ಅರ್ಜಿದಾರ ರಮೇಶ್‌ ಜಾರಕಿಹೊಳಿ ವಿಚಾರಣೆಗೆ ಹಾಜರಾದಲ್ಲಿ ಅವರನ್ನು ಬಂಧಿಸಬಾರದು ಎಂದು ಸಿಐಡಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಸರಕಾರದ ಪರ ವಕೀಲರು ವಾದ ಮಂಡಿಸಿ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್‌ ನೀಡಿದರೂ ಆರೋಪಿ ಇದುವರೆಗೆ ತನಿಖೆಗೆ ಹಾಜರಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸಬೇಕು ಎಂದು ರಮೇಶ್‌ ಜಾರಕಿಹೊಳಿಗೆ ಸೂಚನೆ ನೀಡಿತು.

 

Advertisement

Udayavani is now on Telegram. Click here to join our channel and stay updated with the latest news.

Next