Advertisement
ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಕೆಮಾಡಿಕೊಳ್ಳುತ್ತಿದೆ ಎಂದು ಬಿಂಬಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ನ ಹಿರಿಯ ನಾಯಕರನ್ನು ಸಂಪರ್ಕಿಸಿ ವಿವರಣೆ ನೀಡಿದ್ದಾರೆ. ನಾನು ಕಾನೂನಾತ್ಮಕವಾಗಿ ಪ್ರಕರಣ
ಎದುರಿಸಲು ಸಿದಟಛಿತೆ ಮಾಡಿಕೊಂಡಿದ್ದೇನೆ. ಆದರೂ ಬಿಜೆಪಿಯು ಆದಾಯ ತೆರಿಗೆ ಇಲಾಖೆ, ಇಡಿ ಬಳಸಿ ಕಿರುಕುಳ ನೀಡುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ. ಆ ಸಂದರ್ಭದಲ್ಲಿ ನಿಮ್ಮ ಜತೆ ಹೈಕಮಾಂಡ್ ಇದೆ. ತಲೆಕಡಿಸಿಕೊಳ್ಳಬೇಡಿ. ಕಾನೂನು ಹೋರಾಟ ಮುಂದುವರಿಸಿ ಎಂದು ಭರವಸೆ ನೀಡಿದ್ದಾರೆಂದು ಹೇಳಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಜತೆ ಜೆಡಿಎಸ್ ಸಹ ಜತೆ ನಿಂತಿದ್ದು, ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಡಿಕೆಶಿ ಅವರಿಗೆ ಧೈರ್ಯ ತುಂಬಿದ್ದಾರೆ.
Related Articles
Advertisement
ನಾನು ಬಿಜೆಪಿ ಸೇರುವ ಬಗ್ಗೆ ಯಾರೂ ನನ್ನೊಂದಿಗೆ ಚರ್ಚೆ ನಡೆಸಿಲ್ಲ. ರಮೇಶ್ ಜಾರಕಿಹೊಳಿ ಜತೆಗೆ ಯಾರು ಸಂಪರ್ಕಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಂಗಳವಾರ ಬೆಳಗ್ಗೆ ರಮೇಶ್ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.
– ಸತೀಶ್ ಜಾರಕಿಹೊಳಿ, ಶಾಸಕ