Advertisement

Anantkumar Hegde ವಿರುದ್ಧದ 2 ಪ್ರಕರಣಗಳಿಗೆ ಹೈಕೋರ್ಟ್‌ ತಡೆ

12:26 AM Mar 16, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಉತ್ತರಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನಲ್ಲಿ ಅನಧಿಕೃತವಾಗಿ ಧ್ವಜದ ಕಟ್ಟೆ ಕಟ್ಟಿ ಅದಕ್ಕೆ ವೀರ ಸಾರ್ವಕರ್‌ ಹೆಸರಿಟ್ಟು ಅಲ್ಲಿ ಭಗವಾಧ್ವಜ ಅಳವಡಿಸಿದ ಪ್ರಕರಣ ಸಂಬಂಧ ಉತ್ತರಕನ್ನಡ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

Advertisement

ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಹೆಗಡೆ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳು ನ್ಯಾ| ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದವು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ ಎರಡೂ ಪ್ರಕರಣಗಳಿಗೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next