Advertisement
ಏ. 19ರಿಂದ ಆರಂಭವಾಗಲಿರುವ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕೊಡಿಸುವಂತೆ ಕೋರಿ ಇಬ್ಬರು ಡಿಪ್ಲೋಮಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.
Related Articles
Advertisement
ಆಟೋಚಾಲಕರ ಮಕ್ಕಳಾದ ಮಡಿವಾಳದ ಟಿ.ರವಿ ಹಾಗೂ ವಿಜಯ್, ಕೋರಮಂಗಲದ ಆರ್.ಜೆ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಮೆಕ್ಟ್ರಾನಿಕ್ಸ್ ಪದವಿಯ ಎರಡನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದು, ಎರಡನೇ ಸೆಮಿಸ್ಟರ್ ಪರೀಕ್ಷೆಗೆ 350 ರೂ. ಪರೀಕ್ಷಾ ಶುಲ್ಕ ಪಾವತಿಸುವಂತೆ ಕಾಲೇಜು ಜ.28ರಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಇಬ್ಬರೂ ಶುಲ್ಕ ಪಾವತಿಸಿರಲಿಲ್ಲ.
ನಂತರ 2 ಸಾವಿರ ರೂ. ದಂಡದೊಂದಿಗೆ ಶುಲ್ಕ ಪಾವತಿಗೆ ಮತ್ತೆ ಮೂರು ದಿನ ಕಾಲಾವಕಾಶ ನೀಡಿದ್ದರೂ ಶುಲ್ಕ ಪಾವತಿಸಲು ವಿದ್ಯಾರ್ಥಿಗಳು ವಿಫಲರಾಗಿದ್ದರು. ಹಾಜರಾತಿಯೂ ಇರಲಿಲ್ಲ. ಹೀಗಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕಾಲೇಜು ತಿಳಿಸಿತ್ತು. ಕಾಲೇಜಿನ ಈ ಕ್ರಮ ಪ್ರಶ್ನಿಸಿ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು.