Advertisement
2011ರಲ್ಲಿ ಮೈಸೂರಿನಲ್ಲಿ ಶಿರಸ್ತೇದಾರ್ ಆಗಿದ್ದ ವೇಳೆ ಆಸ್ತಿ ಖಾತಾ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಮೈಸೂರು ಲೋಕಾಯುಕ್ತ ನ್ಯಾಯಾಲಯ ಕಳೆದ ಏಪ್ರಿಲ್ 24ರಂದು ರಘುಮೂರ್ತಿಗೆ 7 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವುದು ಹಾಗೂ ಜಾಮೀನು ನೀಡುವಂತೆ ಕೋರಿ ರಘುಮೂರ್ತಿ ಹೈಕೋರ್ಟ್ ಮೊರೆಹೋಗಿದ್ದರು.
Related Articles
ಮತ್ತೂಂದೆಡೆ ಮೇ 10ರಂದು ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ರಾಮನಗರ ತಹಶೀಲ್ದಾರ್ ಎನ್.ರಘುಮೂರ್ತಿ ಹೆಸರಿನಲ್ಲಿರುವ ನಾಗರಬಾವಿಯ ನಾಯಕ ಲೇಔಟ್ನಲ್ಲಿರುವ ಮನೆ ಹಾಗೂ ರಾಮನಗರದ ತಹಶೀಲ್ದಾರ್ ಕಚೇರಿ ಹಾಗೂ ಚಿಕ್ಕಮಗಳೂರಿನಲ್ಲಿರುವ ಇವರ ತಂದೆಯ ವಾಸದ ಮನೆಯ ಮೇಲೆ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.
Advertisement
ಈ ವೇಳೆ 185 ಗ್ರಾಂ ಚಿನ್ನ, 4 ಕೆ.ಜಿ ಬೆಳ್ಳಿ ಹಾಗೂ 81 ಸಾವಿರ ನಗದು, 36 ಲಕ್ಷ ಮೌಲ್ಯದ ಗೃಹಪಯೋಗಿ ವಸ್ತುಗಳು ಪತ್ತೆಯಾಗಿದ್ದವು. ತಂದೆ, ತಾಯಿ ಮತ್ತು ಹೆಂಡತಿ ಹೆಸರಿನಲ್ಲಿ ಬೆಂಗಳೂರು, ಚಿಕ್ಕಮಗಳೂರು ಮತ್ತು ಮೈಸೂರಿನ ವಿವಿಧ ಬ್ಯಾಂಕ್ಗಳಲ್ಲಿ ಒಟ್ಟು 11 ಖಾತೆಗಳನ್ನು ತೆರೆದಿದ್ದು, 2.17 ಕೋಟಿಗಳ ಠೇವಣಿ ಮತ್ತು ಉಳಿತಾಯ ಖಾತೆ ಹೊಂದಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದರು.