Advertisement

ಪ್ರತಾಪ ಗೌಡ ಪರ ಹೈಕೋರ್ಟ್‌ ತೀರ್ಪು

01:18 AM Sep 29, 2020 | mahesh |

ಬೆಂಗಳೂರು: ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರಿಗೆ ರಾಜ್ಯ ಹೈಕೋರ್ಟ್‌ನಲ್ಲಿ ನಿರಾಳತೆ ಲಭಿಸಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಎಸಗಿದ್ದು, ಅವರ ಆಯ್ಕೆಯನ್ನು ಅಸಿಂಧು ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ, ಬಿಜೆಪಿಯ ಬಸವನ ಗೌಡ ತುರುವಿಹಾಳ ಅವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

Advertisement

ವರ್ಷದ ಹಿಂದೆ ಪ್ರತಾಪ ಗೌಡ ಪಾಟೀಲ್‌ ಅವರ ಸಹಿತ 17 ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ ಇವರೆಲ್ಲರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇವರಲ್ಲಿ  ಪ್ರತಾಪಗೌಡ ಪಾಟೀಲರು ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ತಕರಾರು ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದುದರಿಂದ ಉಪಚುನಾವಣೆ ನಡೆದಿರಲಿಲ್ಲ. ಉಳಿದ 15 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಹೈಕೋರ್ಟ್‌ನ ಈ ತೀರ್ಪಿನಿಂದ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ಎದುರಾಗಿದ್ದ  ಅಡ್ಡಿ ದೂರವಾದಂತಾಗಿದೆ. ಶೀಘ್ರದಲ್ಲೇ ಈ ಕ್ಷೇತ್ರಕ್ಕೂ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next