Advertisement

ರಸ್ತೆಗುಂಡಿ ಮುಚ್ಚಿ ಇಲ್ಲದಿದ್ದರೆ ನಾವು BBMPಯನ್ನೇ ಮುಚ್ಚುತ್ತೇವೆ

09:09 PM Sep 19, 2018 | Karthik A |

ಬೆಂಗಳೂರು: ರಸ್ತೆ ಗುಂಡಿಗಳ ವಿಷಯದಲ್ಲಿ ಹೈಕೋರ್ಟ್‌ ಬುಧವಾರ ಪಾಲಿಕೆ ವಿರುದ್ಧ ಕೆಂಡ ಕಾರಿತು. ಗುರುವಾರದೊಳಗೆ ಬೆಂಗಳೂರಿನ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚಿ, ಇಲ್ಲವಾದಲ್ಲಿ ನಾವು ಬಿಬಿಎಂಪಿಯನ್ನೇ ಮುಚ್ಚಬೇಕಾದೀತು ಎಂಬ ಕಟು ಎಚ್ಚರಿಕೆಯನ್ನು ಹೈಕೋರ್ಟ್ ನೀಡಿತು.

Advertisement

ರಸ್ತೆ ಗುಂಡಿಗಳಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸುತ್ತಿವೆ ಎಂದು ಹೇಳಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌.ಜಿ. ಪಂಡಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪಾಲಿಕೆಯ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ಬುಧವಾರದ ವಿಚಾರಣೆ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಅಧಿಕಾರಿಗಳು ಇದೇ ರೀತಿ ಕೆಲಸ ಮಾಡುವುದಾದರೆ ಬಿಬಿಎಂಪಿಯನ್ನು ಮುಚ್ಚಿಸಬೇಕಾದೀತು ಎಂದು ಎಚ್ಚರಿಕೆ ನೀಡಿತು.

ಏನು ಮಾಡುತ್ತೀರಾ, ಹೇಗೆ ಮಾಡುತ್ತೀರಾ ಅದು ಗೊತ್ತಿಲ್ಲ. ಆದರೆ, ಗುರುವಾರದೊಳಗೆ ಬಿಬಿಎಂಪಿಯ ಎಲ್ಲ 198 ವಾರ್ಡ್‌ಗಳ ರಸ್ತೆಗಳಲ್ಲಿನ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಇದಕ್ಕಾಗಿ ಅಹೋರಾತ್ರಿ ಕೆಲಸ ಮಾಡಿ ಎಂದು ನ್ಯಾಯಪೀಠ ತಾಕೀತು ಮಾಡಿತು. ವಿಚಾರಣೆಯನ್ನು ಗುರುವಾರಕ್ಕೆ (ಸೆ.20) ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next