Advertisement

ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಹೈ ಸೂಚನೆ

11:43 AM Jun 12, 2018 | Team Udayavani |

ಬೆಂಗಳೂರು: ಬಾಲಾಪರಾಧಿಗಳ ನ್ಯಾಯ ಕಾಯಿದೆ (2000) ಮಾರ್ಗಸೂಚಿಗಳ ಅನುಷ್ಠಾನ, ಬಾಲಾಪರಾಧಿಗಳ ಹಕ್ಕುಗಳ ರಕ್ಷಣೆಗೆ ಇದುವರೆಗೂ ಕೈಗೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

Advertisement

ಈ ಕುರಿತು  ಸುಪ್ರೀಂಕೋರ್ಟ್‌ ನಿರ್ದೇಶನದ ಅನ್ವಯ ಹೈಕೋರ್ಟ್‌ ರಿಜಿಸ್ಟ್ರಾರ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ  ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಸೋಮವಾರ ನಡೆಸಿತು.

ವಿಚಾರಣೆ ವೇಳೆ ಹಾಜರಿದ್ದ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಉದಯ್‌ ಹೊಳ್ಳ, ಬಾಲಾಪರಾಧಿಗಳ ಹಕ್ಕುಗಳ ರಕ್ಷಣೆ, ಕಾಯಿದೆಯ ಮಾರ್ಗಸೂಚಿಗಳ ಅನುಷ್ಠಾನ ಪರಿಶೀಲನೆ ಬಾಲಾಪರಾಧಿಗಳ ನ್ಯಾಯ ಸಮಿತಿ ರಚಿಸಲಾಗಿದ್ದು, ಸಭೆಗಳನ್ನು ನಡೆಸಲಾಗುತ್ತಿದೆ.

ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತು ಮುಂದಿನ ವಿಚಾರಣೆ ವೇಳೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿ ಜುಲೈ 4ಕ್ಕೆ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next