Advertisement

ಉನ್ನತ ಶಿಕ್ಷಣ ಗ್ರಾಮೀಣಕ್ಕೂ ವಿಸ್ತರಿಸಬೇಕು

06:50 AM Jul 05, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಇನ್ಸಿಟ್ಯೂಟ್‌ ಆಫ್ ಹ್ಯೂಮನ್‌ ಎಕ್ಸಲೆನ್ಸ್‌ ಸಂಸ್ಥೆಗೆ ಎರಡು ಹೊಸ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ರಾಜ್ಯ  ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಪತ್ರವನ್ನು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸದ್ಗುರು ಶ್ರೀ ಮಧುಸೂದನ್‌ ಸಾಯಿಗೆ ಹಸ್ತಾಂತರಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ಶಿಕ್ಷಣಕ್ಕಾಗಿ  ಸತ್ಯಸಾಯಿ ಶಿಕ್ಷಣ ಸಂಸ್ಥೆ ಗಳು ನೀಡುತ್ತಿರುವ ಕೊಡುಗೆ ಎಲ್ಲರಿಗೂ ಮಾದರಿ. ಈ ನಿಟ್ಟಿನಲ್ಲಿ ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದ ರಲ್ಲಿ ಯಾವುದೇ ಅನುಮಾನವೇ ಇಲ್ಲ  ಎಂದರು. ಉನ್ನತ ಶಿಕ್ಷಣವನ್ನು ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಿಗೂ ವ್ಯಾಪಕವಾಗಿ ವಿಸ್ತರಿಸಬೇಕು ಎಂಬುದು ಸರ್ಕಾರದ ಕನಸು.

ವೈಯಕ್ತಿಕವಾಗಿಯೂ ಇದು ನನಗೆ ಇಷ್ಟವಾದ ಕೆಲಸ. ನಮ್ಮ ಹಳ್ಳಿಗಳ ಮಕ್ಕಳಿಗೆ ಸುಲಭವಾಗಿ  ಉನ್ನತ ಶಿಕ್ಷಣ ಕೈಗೆಟುಕುವಂತಿರಬೇಕು. ಅಂತಹ ಉದಾತ್ತ ಉದ್ದೇಶವನ್ನು ಇಟ್ಟುಕೊಂಡೇ ಸತ್ಯ ಸಾಯಿ ಸಂಸ್ಥೆಗೆ ಕ್ಯಾಂಪಸ್‌ಗಳನ್ನು ಮಂಜೂರು ಮಾಡ ಲಾಗಿದೆ. ಶಿಕ್ಷಣದಿಂದ, ಅದರಲ್ಲೂ ಮೌಲ್ಯಯುತ ಕಲಿಕೆಯಿಂದ ಪರಿವರ್ತನೆ ಸಾಧ್ಯ.  ಅದನ್ನು ಈ ಸಂಸ್ಥೆ ತೋರಿಸಿಕೊಟ್ಟಿದೆ.

ಒಳಿತು ಯಾವುದು, ಕೆಡಕು ಯಾವುದು ಎಂಬುದನ್ನು ಕಲಿಕೆಯ ಹಂತದಲ್ಲೇ ಅರಿತುಕೊಂಡರೆ ಮುಂದಿನ ಜೀವನ ಉಜ್ವಲವಾಗಿರುತ್ತದೆ ಎಂದು ಪ್ರತಿಪಾದಿಸಿದರು. ಜಿಪಂ ಅಧ್ಯಕ್ಷ  ಚಿಕ್ಕನರಸಿಂಹಯ್ಯ, ಅಪರ ಜಿಲ್ಲಾಧಿ ಕಾರಿ ಆರತಿ, ತಹಶೀಲ್ದಾರ್‌ ನಾಗೇಶ್‌, ಸತ್ಯಸಾಯಿ ಲೋಕ ಸೇವಾ ಟ್ರಸ್ಟ್‌ನ ಗೋವಿಂದರೆಡ್ಡಿ, ಸಂಜೀವ ಕರಾಯಶೆಟ್ಟಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next