Advertisement

ಹೆದ್ದಾರಿ ಇಲಾಖೆಯ ವೈಫ‌ಲ್ಯ : ರಸ್ತೆಯಲ್ಲೇ ಹರಿದ ಡ್ರೈನೇಜ್‌ ನೀರು

10:55 PM Feb 21, 2021 | Team Udayavani |

ಉಡುಪಿ: ನಗರದ ಕರಾವಳಿ ಬೈಪಾಸ್‌ ಬಳಿ ಡೈನೇಜ್‌ ಪೈಪ್‌ ತುಂಡಾಗಿ ರಸ್ತೆಯಲ್ಲಿಯೇ ತ್ಯಾಜ್ಯ ನೀರು ಹರಿಯುತ್ತಿದೆ. ನಗರಸಭೆಯ ಈ ಪೈಪ್‌ಲೈನ್‌ ಅನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯವರು ಸ್ಥಳಾಂತರಿಸಿರಲಿಲ್ಲ. ಈಗ ಈ ಪೈಪ್‌ಲೈನ್‌ ಒಡೆದು ಹೋಗಿದ್ದು, ಶನಿವಾರ ಸಂಜೆಯಿಂದಲೇ ಡ್ರೈನೇಜ್‌ ನೀರು ರಸ್ತೆ ತುಂಬಾ ಹರಿಯುತ್ತಿದೆ. ಇದರಿಂದ ಜನರು ಮೂಗು ಮುಚ್ಚಿಕೊಂಡು ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

Advertisement

ಈ ಬಗ್ಗೆ ನಗರಸಭೆಯ ಗಮನಕ್ಕೆ ಬಂದ ತತ್‌ಕ್ಷಣ ಡ್ರೈನೇಜ್‌ ಹರಿಯುವ ನೀರನ್ನು ಸ್ಥಗಿತಗೊಳಿಸಲಾಗಿದೆ. ಹೆದ್ದಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಈ ಬಗ್ಗೆ ನವಯುಗ ಸಂಸ್ಥೆಗೆ ಪತ್ರ ಬರೆದಿದ್ದು, ಸೋಮವಾರದಿಂದ ಕಾಮಗಾರಿ ಆರಂಭಿಸುವುದಾಗಿ ರಾ.ಹೆ.ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಪೌರಾಯುಕ್ತ ಉದಯ ಶೆಟ್ಟಿ, ನಗರಸಭೆ ಸದಸ್ಯರು, ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next